ವಿಶ್ವ ಚಾಂಪಿಯನ್‌ಶಿಪ್‌ ಗೆದ್ದ ಸಿಂಧುಗೆ ಬಹುಮಾನ ಘೋಷಿಸಿದ ಯಡಿಯೂರಪ್ಪ

Published : Aug 25, 2019, 09:06 PM ISTUpdated : Aug 25, 2019, 09:21 PM IST
ವಿಶ್ವ ಚಾಂಪಿಯನ್‌ಶಿಪ್‌ ಗೆದ್ದ ಸಿಂಧುಗೆ ಬಹುಮಾನ ಘೋಷಿಸಿದ ಯಡಿಯೂರಪ್ಪ

ಸಾರಾಂಶ

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪ್ರಶಸ್ತಿ ಗೆದ್ದ ಭಾರತದ ಸ್ಟಾರ್ ಮಹಿಳಾ ಶೆಟ್ಲರ್ ಪಿ.ವಿ.ಸಿಂಧುಗೆ ಪ್ರಧಾನಿ ನರೇಂದ್ರ ಮೋದಿ ಸೇರಿಂತೆ ಹಲವರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಇನ್ನು ಕರ್ನಾಟಕ ಸಿಎಂ, ಸಿಂಧುಗೆ ಅಭಿನಂದನೆಗಳನ್ನು ತಿಳಿಸುವುದರ ಜತೆಗೆ ಬಹುಮಾನ ಘೋಷಣೆ ಮಾಡಿದ್ದಾರೆ. 

ನವದೆಹಲಿ/ಬೆಂಗಳೂರು, [ಆ.25]: ವರ್ಲ್ಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ ಪಿ.ವಿ.ಸಿಂಧುಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ. ಘೋಷಣೆ ಮಾಡಿದೆ.

ವಿಶ್ವ ಬ್ಯಾಡ್ಮಿಂಟನ್: ಚಿನ್ನ ಗೆದ್ದು ಇತಿಹಾಸ ಬರೆದ PV ಸಿಂಧು

ನವದೆಹಲಿಯಲ್ಲಿ ಪಿವಿ ಸಿಂಧು ಸಾಧನೆಗೆ ಶುಭ ಕೋರಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ ಬ್ಯಾಡ್ಮಿಂಟನ್ ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ಸಿಂಧುಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ನೀಡೋದಾಗಿ ಹೇಳಿದರು.

ಇಂದು [ಭಾನುವಾರ] ಸ್ವಿಟ್ಜರ್ಲೆಂಡ್ ನಲ್ಲಿ ನಡೆದ ಮಹಿಳಾ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌  ಫೈನಲ್ ಪಂದ್ಯದಲ್ಲಿ ಜಪಾನ್ ನ ಸ್ಟಾರ್  ಆಟಗಾರ್ತಿ ನೊಜೊಮಿ ಒಕುಹರಾರನ್ನ  21-7, 21-7 ನೇರ ಸೆಟ್ ಗಳಿಂದ ಮಣಿಸಿದರು. ಈ ಮೂಲಕ ವರ್ಲ್ಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ಖ್ಯಾತಿಗೆ ಭಾಜನರಾದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ಲುಕ್‌ನಲ್ಲಿ ವಿರಾಟ್ ಕೊಹ್ಲಿ, ಪಾಸ್ಟೆಲ್ ಹೇರ್‌ಸ್ಟೈಲ್‌ನಲ್ಲಿ ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡ ಕ್ರಿಕೆಟರ್
ಮುಂಬೈನ ಅತ್ಯಂತ ದುಬಾರಿ ಏರಿಯಾದಲ್ಲಿ ಶ್ರೇಯಸ್ ಅಯ್ಯರ್ ಹೊಸ ಮನೆ: ತಿಂಗಳ ಬಾಡಿಗೆ ಕೇಳಿದ್ರೆ ತಲೆ ತಿರುಗೋದು ಗ್ಯಾರಂಟಿ