
ನವದೆಹಲಿ/ಬೆಂಗಳೂರು, [ಆ.25]: ವರ್ಲ್ಡ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ ಪಿ.ವಿ.ಸಿಂಧುಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ. ಘೋಷಣೆ ಮಾಡಿದೆ.
ವಿಶ್ವ ಬ್ಯಾಡ್ಮಿಂಟನ್: ಚಿನ್ನ ಗೆದ್ದು ಇತಿಹಾಸ ಬರೆದ PV ಸಿಂಧು
ನವದೆಹಲಿಯಲ್ಲಿ ಪಿವಿ ಸಿಂಧು ಸಾಧನೆಗೆ ಶುಭ ಕೋರಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ ಬ್ಯಾಡ್ಮಿಂಟನ್ ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ಸಿಂಧುಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ನೀಡೋದಾಗಿ ಹೇಳಿದರು.
ಇಂದು [ಭಾನುವಾರ] ಸ್ವಿಟ್ಜರ್ಲೆಂಡ್ ನಲ್ಲಿ ನಡೆದ ಮಹಿಳಾ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಜಪಾನ್ ನ ಸ್ಟಾರ್ ಆಟಗಾರ್ತಿ ನೊಜೊಮಿ ಒಕುಹರಾರನ್ನ 21-7, 21-7 ನೇರ ಸೆಟ್ ಗಳಿಂದ ಮಣಿಸಿದರು. ಈ ಮೂಲಕ ವರ್ಲ್ಡ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ಖ್ಯಾತಿಗೆ ಭಾಜನರಾದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.