
ಕಾನ್ಪುರ(ಅ.28): ಭಾನುವಾರ ನಡೆಯಲಿರುವ 3 ಏಕದಿನ ಪಂದ್ಯಗಳ ಸರಣಿಯ ಅಂತಿಮ ಪಂದ್ಯವನ್ನಾಡಲು ಕಾನ್ಪುರಕ್ಕೆ ಗುರುವಾರ ಸಂಜೆ ಆಗಮಿಸಿದ ಭಾರತ ಹಾಗೂ ನ್ಯೂಜಿಲೆಂಡ್ ತಂಡದ ಆಟಗಾರರಿಗೆ ಕೇಸರಿ ಸ್ವಾಗತ ದೊರೆಯಿತು.
ಸಾಮಾನ್ಯವಾಗಿ ಆಟಗಾರರು ಆಗಮಿಸಿದ ಸಂದರ್ಭದಲ್ಲಿ ಅವರಿಗೆ ಆರತಿ ಬೆಳಗಿ, ಹೂವಿನ ಹಾರ ಹಾಕಿ ಸ್ವಾಗತ ಕೋರಲಾಗುವುದು. ಆದರೆ, ಆಟಗಾರರು ತಂಗಿರುವ ಹೋಟೆಲ್ ಸಿಬ್ಬಂದಿ, ಆಟಗಾರರಿಗೆ ಹಾರಕ್ಕೆ ಬದಲು ಕೇಸರಿ ಶಾಲು ಹೊದಿಸಿ ಸ್ವಾಗತ ಕೋರಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹೋಟೆಲ್'ನ ವ್ಯವಸ್ಥಾಪಕ ನಿರ್ದೇಶಕ ವಿಕಾಸ್, ‘ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆಯಲ್ಲಿ ದೀಪಾವಳಿ ಆಚರಣೆಯಿಂದ ಪ್ರೇರಣೆಗೊಂಡು ಆಟಗಾರರಿಗೆ ಭಾರತೀಯ ಸಂಸ್ಕೃತಿಯ ಅನುಭವ ನೀಡುವ ಸಲುವಾಗಿ ಈ ರೀತಿಯ ಸ್ವಾಗತ ನೀಡಲಾಯಿತು’ ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.