ಬೌಲಿಂಗ್ ಮಾಡುವಾಗ ಹಾರಿಹೋಯ್ತು ಕ್ರಿಕೆಟಿಗನ ಪ್ರಾಣಪಕ್ಷಿ..!

Published : Dec 16, 2017, 06:07 PM ISTUpdated : Apr 11, 2018, 01:10 PM IST
ಬೌಲಿಂಗ್ ಮಾಡುವಾಗ ಹಾರಿಹೋಯ್ತು ಕ್ರಿಕೆಟಿಗನ ಪ್ರಾಣಪಕ್ಷಿ..!

ಸಾರಾಂಶ

ಮೃತ ಆಟಗಾರನನ್ನು ಪದ್ಮ ಜೋಡುಕಲ್ಲು ಎಂದು ಗುರುತಿಸಲಾಗಿದೆ. ಮೀಯಪದವು ಬಳಿಯ ಕ್ರೀಡಾಂಗಣದಲ್ಲಿ ಇಂದು ಮತ್ತು ನಾಳೆ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟವನ್ನ ಆಯೋಜಿಸಲಾಗಿದೆ. ಈ ಟೂರ್ನಿಯಲ್ಲಿ ದುರ್ಘಟನೆ ಸಂಭವಿಸಿದೆ.

ಮಂಗಳೂರು(ಡಿ.16): ಕ್ರಿಕೆಟ್ ಆಟದ ವೇಳೆ ಬೌಲಿಂಗ್ ಮಾಡುತ್ತಿದ್ದವ ಹೃದಯಘಾತಕ್ಕೆ ಒಳಗಾಗಿ ಕ್ರೀಡಾಂಗಣದಲ್ಲೇ ಸಾವನ್ನಪ್ಪಿದ ಘಟನೆ ಕಾಸರಗೋಡಿನ ಮೀಯಪದವು ಎಂಬಲ್ಲಿ ನಡೆದಿದೆ.

ಮೃತ ಆಟಗಾರನನ್ನು ಪದ್ಮ ಜೋಡುಕಲ್ಲು ಎಂದು ಗುರುತಿಸಲಾಗಿದೆ. ಮೀಯಪದವು ಬಳಿಯ ಕ್ರೀಡಾಂಗಣದಲ್ಲಿ ಇಂದು ಮತ್ತು ನಾಳೆ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟವನ್ನ ಆಯೋಜಿಸಲಾಗಿದೆ. ಈ ಟೂರ್ನಿಯಲ್ಲಿ ದುರ್ಘಟನೆ ಸಂಭವಿಸಿದೆ.

ಕ್ರಿಕೆಟ್ ಟೂರ್ನಿಯಲ್ಲಿ ಜೆಕೆವಿ ಜೋಡುಕಲ್ಲು ಎಂಬ ತಂಡ ಮತ್ತು ಸ್ಥಳೀಯ ಮತ್ತೊಂದು ತಂಡದ ನಡುವೆ ಪಂದ್ಯ ನಡೆಯುತ್ತಿತ್ತು. ಈ ವೇಳೆ ಜೆಕೆವಿ ತಂಡದ ಆಟಗಾರ ಪದ್ಮ ಜೋಡುಕಲ್ಲು ಬೌಲಿಂಗ್'ನಲ್ಲಿ ನಿರತರಾಗಿದ್ದು, ಬೌಲಿಂಗ್ ಆರಂಭಕ್ಕೆ ಅಣಿಯಾಗಿ ಓಡಿ ಬಂದ ವೇಳೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅಲ್ಲಿದ್ದವರು ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸಾಗಿಸಲು ಸ್ಥಳೀಯರು ಮುಂದಾದರು. ಅದಾಗಲೇ ಆತನ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2026ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಎರಡು ಅಪರೂಪದಲ್ಲೇ ಅಪರೂಪದ ದಾಖಲೆ ಬರೆಯಲು ರೆಡಿಯಾದ ಟೀಂ ಇಂಡಿಯಾ!
ಕರ್ನಾಟಕದ ಅಭಿಮನ್ಯು ಮಿಥುನ್ ದಾಖಲೆ ಸರಿಗಟ್ಟಿದ ಬೌಲರ್‌, ಟಿ20ಯ ಒಂದೇ ಓವರ್‌ನಲ್ಲಿ ಐದು ವಿಕೆಟ್‌ ವಿಶ್ವದಾಖಲೆ!