ಯುವಿ ಭವಿಷ್ಯದ ಬಗ್ಗೆ ಕೊನೆಗೂ ತುಟಿ ಬಿಚ್ಚಿದ ಆಯ್ಕೆ ಸಮಿತಿ ಅಧ್ಯಕ್ಷ..!

Published : Aug 15, 2017, 01:29 PM ISTUpdated : Apr 11, 2018, 12:41 PM IST
ಯುವಿ ಭವಿಷ್ಯದ ಬಗ್ಗೆ ಕೊನೆಗೂ ತುಟಿ ಬಿಚ್ಚಿದ ಆಯ್ಕೆ ಸಮಿತಿ ಅಧ್ಯಕ್ಷ..!

ಸಾರಾಂಶ

ಯುವಿಗೆ ವಿಶ್ರಾಂತಿ ನೀಡಿದಾಕ್ಷಣ ಅವರಿಗೆ ರಾಷ್ಟ್ರೀಯ ತಂಡದ ಬಾಗಿಲು ಮುಚ್ಚಿದೆ ಎಂದರ್ಥವಲ್ಲ ಎಂದು ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

ಪಲ್ಲೆಕೆಲೆ(ಆ.15): ಹಿರಿಯ ಕ್ರಿಕೆಟಿಗ ಯುವರಾಜ್ ಸಿಂಗ್ ಅವರಿಗೆ ವಿಶ್ರಾಂತಿ ನೀಡಲಾಗಿದೆಯೇ ಹೊರತು, ತಂಡದಿಂದ ಕೋಕ್ ನೀಡಿಲ್ಲ ಎಂದು ರಾಷ್ಟ್ರೀಯ ತಂಡದ ಪ್ರಧಾನ ಆಯ್ಕೆದಾರ ಎಂ.ಎಸ್.ಕೆ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

ಯುವಿಗೆ ವಿಶ್ರಾಂತಿ ನೀಡಿದಾಕ್ಷಣ ಅವರಿಗೆ ರಾಷ್ಟ್ರೀಯ ತಂಡದ ಬಾಗಿಲು ಮುಚ್ಚಿದೆ ಎಂದರ್ಥವಲ್ಲ ಎಂದು ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

ಮುಂಬರುವ ಶ್ರೀಲಂಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಯಿಂದ ಯುವರಾಜ್ ಸಿಂಗ್ ಅವರನ್ನು ಕೈ ಬಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಯುವರಾಜ್ ವೃತ್ತಿಜೀವನ ಕೊನೆಘಟ್ಟ ತಲುಪಿದೆ. ಅವರ ಆಟ ಇನ್ನು ಮುಗಿಯಿತು ಎಂಬ ಸುದ್ದಿಗಳು ಹರಿದಾಡತೊಡಗಿತ್ತು.

ಈ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ನೀಡಿರುವ ಪ್ರಸಾದ್, ‘ಯುವರಾಜ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಯಾವ ಆಟಗಾರನಿಗೂ ತಂಡದ ಬಾಗಿಲು ಎಂದಿಗೂ ಮುಚ್ಚುವುದಿಲ್ಲ. ಯಾವ ಕ್ಷಣದಲ್ಲಿ ಬೇಕಾದರೂ ಆಡಲು ಅವಕಾಶ ಲಭ್ಯವಾಗಬಹುದು. ತಂಡದ ಆಯ್ಕೆ ಸಂದರ್ಭದಲ್ಲಿ ಪ್ರತಿಯೊಬ್ಬ ಆಟಗಾರನ ಕುರಿತು ಚರ್ಚೆ ನಡೆಸಲಾಗುವುದು ಎಂದಿದ್ದಾರೆ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

John Cena ಕೊನೆಯ ಮ್ಯಾಚ್ ಯಾವಾಗ? ಎದುರಾಳಿ ಯಾರು? ಲೈವ್ ಸ್ಟ್ರೀಮಿಂಗ್ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
ವಿಜಯ್‌ ಹಜಾರೆ ಟ್ರೋಫಿ: ಒಂದೂವರೆ ದಶಕದ ಬಳಿಕ ಡೆಲ್ಲಿ ಪರ ವಿರಾಟ್ ಕೊಹ್ಲಿ ಮೈದಾನಕ್ಕೆ! ಬೆಂಗಳೂರಲ್ಲಿ ನಡೆಯುತ್ತೆ ಮ್ಯಾಚ್‌