
ಮುಂಬೈ(ನ.07): ಟೀಂ ಇಂಡಿಯಾದ ಅನುಭವಿ ಕ್ರಿಕೆಟಿಗ ಯುವರಾಜ್ ಸಿಂಗ್ ಕ್ರಿಕೆಟ್ ಹಾಗೂ ವೈಯುಕ್ತಿಕ ಬದುಕಿನ ಹಲವು ನೆನಪುಗಳನ್ನು ಹಿಂದಿಯ ಖ್ಯಾತ ರಿಯಾಲಿಟಿ ಕಾರ್ಯಕ್ರಮವಾದ 'ಕೌನ್ ಬನೇಗಾ ಕರೋಡ್'ಪತಿ' ಯಲ್ಲಿ ಬಿಚ್ಚಿಟ್ಟಿದ್ದಾರೆ.
ಈ ವೇಳೆ ಕ್ಯಾನ್ಸರ್ ಮಹಾಮಾರಿಯ ವಿರುದ್ಧ ಹೋರಾಡಿದ ಕಥೆಯನ್ನು ತೆರೆದಿಟ್ಟಿದ್ದಾರೆ. ಅಮಿತಾಭ್ ಬಚ್ಚನ್ ನಡೆಸಿಕೊಡುವ ಕ್ವಿಜ್ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ವಿದ್ಯಾ ಬಾಲನ್ ಜತೆ ಯುವರಾಜ್ ಸ್ಪರ್ಧಿಸಿದ್ದರು.
ಈ ವೇಳೆ 2011ರ ವಿಶ್ವಕಪ್ ವೇಳೆ ಕ್ಯಾನ್ಸರ್'ನಿಂದ ಅನುಭವಿಸಿದ ನೋವನ್ನು ನೆನೆದು ಯುವರಾಜ್ ಕಣ್ಣೀರಿಟ್ಟಿದ್ದಾರೆ. ‘ಕ್ಯಾನ್ಸರ್ ಇದೆ ಎಂದು ತಿಳಿದ ನಂತರವೂ ನಾನು ಆಡುವುದನ್ನು ಮುಂದುವರಿಸಿದೆ. ತಕ್ಷಣ ಚಿಕಿತ್ಸೆ ಪಡೆಯದಿದ್ದರೆ ಉಳಿಯುವುದೇ ಕಷ್ಟ ಎಂದಿದ್ದರು. ಆದರೆ, ವಿಶ್ವಕಪ್ ಗೆಲ್ಲಬೇಕು ಎನ್ನುವುದೊಂದೇ ನನ್ನ ಗುರಿಯಾಗಿತ್ತು’ ಎಂದು ಯುವಿ ಹೇಳಿದ್ದಾರೆ.
ಯುವರಾಜ್ ಸಿಂಗ್ ಅವರ ಅದ್ಭುತ ಆಲ್ರೌಂಡ್ ಪ್ರದರ್ಶನದ ನೆರವಿನಿಂದ ಟೀಂ ಇಂಡಿಯಾ 28 ವರ್ಷಗಳ ಬಳಿಕ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. 2011 ರ ವಿಶ್ವಕಪ್'ನಲ್ಲಿ ನಾಲ್ಕು ಅರ್ಧಶತಕ ಸೇರಿದಂತೆ 15 ವಿಕೆಟ್ ಕಬಳಿಸಿ ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.