
ಬೆಂಗಳೂರು[ಅ.13]: ಟೀಂ ಇಂಡಿಯಾದ ಬಲಿಷ್ಠ ಕ್ರಿಕೆಟಿಗ ಉಮೇಶ್ ಯಾದವ್ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್’ನಲ್ಲಿ 6 ವಿಕೆಟ್ ಕಬಳಿಸುವ ಮೂಲಕ ಭರ್ಜರಿಯಾಗಿ ಫಾರ್ಮ್’ಗೆ ಮರಳಿದ್ದಾರೆ. ಟೆಸ್ಟ್’ಗೆ ಪದಾರ್ಪಣೆ ಮಾಡಿದ ಶಾರ್ದೂಲ್ ಠಾಕೂರ್ ಕೇವಲ 10 ಎಸೆತಗಳನ್ನು ಹಾಕುವುದರೊಳಗಾಗಿ ಗಾಯಗೊಂಡು ಹೊರ ನಡೆದರು. ಆ ಬಳಿಕ ವೇಗದ ಬೌಲಿಂಗ್ ಜವಾಬ್ದಾರಿ ಹೊತ್ತುಕೊಂಡ ಉಮೇಶ್ 6 ವಿಕೆಟ್ ಕಬಳಿಸುವ ಮೂಲಕ ವಿಂಡೀಸ್ ತಂಡವನ್ನು ಮೊದಲ ಇನ್ನಿಂಗ್ಸ್’ನಲ್ಲಿ ಕೇವಲ 311 ರನ್’ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು.
ಒಂದು ಹಂತದಲ್ಲಿ ವೆಸ್ಟ್ ಇಂಡೀಸ್ ತಂಡ 113 ರನ್’ಗಳಿಗೆ 5 ವಿಕೆಟ್ ಕಳೆದುಕೊಂಡು ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯಲ್ಲಿತ್ತು. ಆದರೆ ರೋಸ್ಟನ್ ಚೇಸ್ ಹಾಗೂ ಶೇನ್ ಡೌರಿಚ್ ಅರ್ದಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಈ ಜೋಡಿಯನ್ನು ಬೇರ್ಪಡಿಸಲು ಉಮೇಶ್ ಯಶಸ್ವಿಯಾದರು. ಇದಾದ ಬಳಿಕ ಚೇಸ್ ಹಾಗೂ ನಾಯಕ ಹೋಲ್ಡರ್ ಶತಕದ ಜತೆಯಾಟವಾಡಿ ತಂಡ ಮೊತ್ತವನ್ನು 280ರ ಗಡಿ ದಾಟಿಸಿದರು. ಈ ಸಂದರ್ಭದಲ್ಲಿ ಮತ್ತೆ ದಾಳಿಗಿಳಿದ ಉಮೇಶ್ ಅರ್ಧಶತಕ ಸಿಡಿಸಿ ಮುನ್ನುಗ್ಗುತ್ತಿದ್ದ ಹೋಲ್ಡರ್ ಬಲಿ ಪಡೆಯುವಲ್ಲಿ ಯಶಸ್ವಿಯಾದರು. ಇಂದು ಶತಕ ಸಿಡಿಸಿದ ಚೇಸ್ ವಿಕೆಟ್ ಪಡೆಯುವಲ್ಲೂ ಉಮೇಶ್ ಯಶಸ್ವಿಯಾದರು.
ಉಮೇಶ್ ಪ್ರದರ್ಶನವನ್ನು ಕೊಂಡಾಡಿರುವ ಅನುಭವಿ ಕ್ರಿಕೆಟಿಗ ಯುವರಾಜ್ ಸಿಂಗ್, ಮೃಗ ಭರ್ಜರಿಯಾಗಿಯೇ ಕಮ್’ಬ್ಯಾಕ್ ಮಾಡಿದೆ. ಕಠಿಣ ಪರಿಶ್ರಮ ಯಾವತ್ತಿಗೂ ವ್ಯರ್ಥವಾಗುವುದಿಲ್ಲ. ಗ್ರೇಟ್ ಸ್ಪೆಲ್ ಎಂದು ಟ್ವೀಟ್ ಮಾಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.