ಕ್ರಿಕೆಟ್‌ಗೆ ಗುಡ್ ಬೈ ಹೇಳಿದ ಕೈಫ್‌ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಯುವಿ!

Published : Jul 16, 2018, 02:25 PM ISTUpdated : Jul 16, 2018, 02:27 PM IST
ಕ್ರಿಕೆಟ್‌ಗೆ ಗುಡ್ ಬೈ ಹೇಳಿದ ಕೈಫ್‌ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಯುವಿ!

ಸಾರಾಂಶ

ಟೀಂ ಇಂಡಿಯಾ ಐತಿಹಾಸಿಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಮೊಹಮ್ಮದ್ ಕೈಫ್ ವಿದಾಯಕ್ಕೆ, ಆಲ್‌ರೌಂಡರ್ ಯುವರಾಜ್ ಸಿಂಗ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ವಿದಾಯದ ಕುರಿತು ಯುವರಾಜ್ ಸಿಂಗ್ ಮಾಡಿದ ಟ್ವೀಟ್ ಏನು?

ಲಂಡನ್(ಜು.16): ನಾಟ್‌ವೆಸ್ಟ್ ಸರಣಿಯ ಗೆಲುವಿನ ರೂವಾರಿ ಮೊಹಮ್ಮದ್ ಕೈಫ್, ಜುಲೈ13ರಂದು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. 2002ರಲ್ಲಿ ಇಂಗ್ಲೆಂಡ್ ವಿರುದ್ಧ ಮೊಹಮ್ಮದ್ ಕೈಫ್ ಹಾಗೂ ಯುವರಾಜ್ ಸಿಂಗ್ ದಿಟ್ಟ ಹೋರಾಟದಿಂದ ಭಾರತ ಲಾರ್ಡ್ಸ್ ಮೈದಾನದಲ್ಲಿ ಸರಣಿ ಗೆದ್ದಿತ್ತು. ನಾಯಕ ಸೌರವ್ ಗಂಗೂಲಿ ಗೆಲುವಿನ ಸಂಭ್ರಮದಲ್ಲಿ ಶರ್ಟ್ ಬಿಚ್ಚಿ ತಿರುಗಿಸಿ ಇಂಗ್ಲೆಂಡ್ ಕ್ರಿಕೆಟಿಗರಿಗೆ ತಿರುಗೇಟು ನೀಡಿದ್ದರು.

ನಾಟ್‌ವೆಸ್ಟ್ ರೋಚಕ ಗೆಲುವಿನ 16ನೇ ವರ್ಷದ ಸಂಭ್ರಮಾಚರಣೆಯಲ್ಲಿ ಮೊಹಮ್ಮದ್ ಕೈಫ್ ವಿದಾಯ ಹೇಳಿದ್ದರು. ಕೈಫ್ ವಿದಾಯಕ್ಕೆ  ಟೀಂ ಇಂಡಿಯಾ ಆಲ್‌ರೌಂಡರ್ ಯುವರಾಜ್ ಸಿಂಗ್ ಟ್ವೀಟ್ ಮೂಲಕ ಶುಭಕೋರಿದ್ದಾರೆ.

 

 

ಭಾರತೀಯ ಕ್ರಿಕೆಟ್‌ಗೆ ಕೈಫ್ ಕೊಡುಗೆ ಅಪಾರ. ದೇಶವೇ ಕೈಫ್ ಸಾಧನೆಗೆ ಹೆಮ್ಮೆಪಡುತ್ತಿದೆ. ಅದ್ಬುತ ಫಿನೀಶರ್ ಹಾಗೂ ನನ್ನ ಹೊರತು ಪಡಿಸಿದರೆ ಅತ್ಯುತ್ತಮ ಫೀಲ್ಡರ್ ಎಂದು ಯುವರಾಜ್ ಸಿಂಗ್,  ಕೈಫ್ ಕಾಲೆಳೆದಿದ್ದಾರೆ. ಫೀಲ್ಡಿಂಗ್ ಕುರಿತು ಕೈಫ್ ಕಾಲೆಳೆದು ಅಚ್ಚರಿ ಮೂಡಿಸಿದ ಯುವಿ,  2002ರ ನಾಟ್ ವೆಸ್ಟ್ ಸರಣಿಯ ಫೈನಲ್  ಪಂದ್ಯದಲ್ಲಿ ನಿಮ್ಮ ಜೊತೆಗಿನ ಜೊತೆಯಾಟ ನನಗೆ ಹಮ್ಮೆಯಿದೆ ಎಂದಿದ್ದಾರೆ.

ಭಾರತದ ಪರ 125 ಏಕದಿನ ಪಂದ್ಯ ಆಡಿರುವ ಕೈಫ್ 2753 ರನ್ ಸಿಡಿಸಿದ್ದಾರೆ. 2 ಶತಕ ಹಾಗೂ 17 ಅರ್ಧಶಕಕ ಸಿಡಿಸಿಡಿಸಿದ್ದಾರೆ. 13 ಟೆಸ್ಟ್ ಪಂದ್ಯದಿಂದ 624 ರನ್ ಬಾರಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 1 ಶತಕ ಹಾಗೂ 3 ಅರ್ಧಶತಕ ಬಾರಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಸಿಸಿಐ ಮೇಲೆ ವರ್ಣಭೇದ ಆರೋಪ ಮಾಡಿ ಹಠಾತ್‌ ನಿವೃತ್ತಿ ಹೇಳಿದ ಪ್ರಖ್ಯಾತ ಕ್ರಿಕೆಟ್‌ ವಿಶ್ಲೇಷಕ!
ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ ರಾಯಲ್ಸ್ ತೆಕ್ಕೆ ಸೇರಿದ್ದ ಸ್ಟಾರ್ ಆಲ್ರೌಂಡರ್ ಐಪಿಎಲ್ ಟೂರ್ನಿಯಿಂದಲೇ ಔಟ್!