
ಬೆಂಗಳೂರು(ಜೂ.26): ಅನಿಲ್ ಕುಂಬ್ಳೆ ರಾಜೀನಾಮೆಯ ಬಳಿಕ ಪ್ರಧಾನ ಕೋಚ್ ಅನುಪಸ್ಥಿತಿ ಎದುರಿಸುತ್ತಿರುವ ಟೀಂ ಇಂಡಿಯಾಗೆ ಹಿರಿಯ ಆಟಗಾರರಾದ ಮಹೇಂದ್ರ ಸಿಂಗ್ ಧೋನಿ ಹಾಗೂ ಯುವರಾಜ್ ಸಿಂಗ್ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ತಿಳಿಸಿದ್ದಾರೆ.
ಧೋನಿ, ಯುವರಾಜ್ ಮತ್ತು ಕೊಹ್ಲಿ ತೆರೆಮರೆಯಲ್ಲಿ ಕೋಚ್ ಕಾರ್ಯ ನಿರ್ವಹಿಸುತ್ತಿದ್ದಾರೆ. ತಂಡದಲ್ಲಿರುವ ಯುವ ಆಟಗಾರರಿಗೆ ಮಾರ್ಗದರ್ಶಕರಾಗಿಯೂ ಧೋನಿ ಹಾಗೂ ಯುವಿ ಕೆಲಸ ಮಾಡುತ್ತಿದ್ದಾರೆ. ಈ ಇಬ್ಬರು ಹಿರಿಯ ಆಟಗಾರರ ಅನುಭವ ಯುವಕರಿಗೆ ಸಾಕಷ್ಟು ಪಾಠ ಕಲಿಸಲಿದೆ ಎಂದು ಬಂಗಾರ್ ಅಭಿಪ್ರಾಯಪಟ್ಟಿದ್ದಾರೆ.
ಯುವರಾಜ್(302), ಧೋನಿ(292) ಮತ್ತು ಕೊಹ್ಲಿ(185) ಈ ಮೂವರು ಆಟಗಾರರು ಒಟ್ಟು 779 ಏಕದಿನ ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.