
ನವದೆಹಲಿ(ಮೇ.20): ಟೀಂ ಇಂಡಿಯಾ ಕ್ರಿಕೆಟ್ನಿಂದ ದೂರ ಉಳಿದಿರುವ ಯುವರಾಜ್ ಸಿಂಗ್, ಈ ಬಾರಿ ಐಪಿಎಲ್ ಟೂರ್ನಿಯಲ್ಲೂ ಹೆಚ್ಚಿನ ಅವಕಾಶ ಪಡೆದಿಲ್ಲ. ಇದೀಗ ಮತ್ತೆ ತಂಡಕ್ಕೆ ಕಮ್ಬ್ಯಾಕ್ ಮಾಡೋ ಮಾತು ಕಷ್ಟ ಅನ್ನೋದು ಯುವಿ ಅರಿತಿದ್ದಾರೆ. ಹೀಗಾಗಿ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ನಿವೃತ್ತಿ ನಿರ್ಧಾರ ಮಾಡಿದ್ದಾರೆ.
ಇದನ್ನೂ ಓದಿ: ವಿಶ್ವಕಪ್ನಲ್ಲಿ ಬಲಿಷ್ಠ ತಂಡಗಳಿಗೆ ಎದುರಾಗಲಿದೆ ಶಾಕ್- ಕುಂಬ್ಳೆ ಎಚ್ಚರಿಕೆ!
ಭಾರತದ ದಿಗ್ಗಜ ಕ್ರಿಕೆಟಿಗ ಯುವರಾಜ್ ಸಿಂಗ್, ಐಸಿಸಿ ಮಾನ್ಯತೆ ಹೊಂದಿರುವ ವಿದೇಶಿ ಟಿ20 ಲೀಗ್ಗಳಲ್ಲಿ ಆಡಲು ಬಿಸಿಸಿಐ ಅನುಮತಿ ನೀಡಿದರೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸುವ ಗಂಭೀರ ಚಿಂತನೆ ನಡೆಸಿದ್ದಾರೆ. ಭಾರತ ತಂಡದ ಪರ ಆಡಲು ಮತ್ತೆ ಅವಕಾಶ ಸಿಗುವುದಿಲ್ಲ ಎನ್ನುವುದನ್ನು ಅರ್ಥ ಮಾಡಿಕೊಂಡಿರುವ ಯುವರಾಜ್ಗೆ ಐಪಿಎಲ್ನಲ್ಲೂ ಅಷ್ಟಾಗಿ ಅವಕಾಶಗಳನ್ನು ಪಡೆಯುತ್ತಿಲ್ಲ.
ಇದನ್ನೂ ಓದಿ: ಕೊಹ್ಲಿ ಕಾಲೆಳೆದ ಹಾಡ್ಜ್ ವಿರುದ್ಧ ನೆಟ್ಟಿಗರ ಆಕ್ರೋಶ!
ಕೆನಡಾ, ಐರ್ಲೆಂಡ್, ನೆದರ್ಲೆಂಡ್ಸ್ನಲ್ಲಿ ಆರಂಭಗೊಂಡಿರುವ ಟಿ20 ಲೀಗ್ಗಳಲ್ಲಿ ಯುವರಾಜ್ರಂತಹ ದಿಗ್ಗಜ ಆಟಗಾರರಿಗೆ ಹೆಚ್ಚಿನ ಬೆಲೆ ಸಿಗಲಿದೆ. ಹೀಗಾಗಿ ಆ ಲೀಗ್ಗಳಲ್ಲಿ ಆಡಲು ಅನುಮತಿ ನೀಡುವಂತೆ ಬಿಸಿಸಿಐ ಜತೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ವರದಿಯೊಂದು ತಿಳಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.