
ಲಂಡನ್(ಜು.15): ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಅನುಭವಿಸೋ ಮೂಲಕ ಸರಣಿ 1-1 ಅಂತರದಲ್ಲಿ ಸಮಭಲಗೊಂಡಿದೆ. ಹೀಗಾಗಿ ಅಂತಿಮ ಪಂದ್ಯ ಇದೀಗ ಭಾರಿ ಕುತೂಹಲ ಮೂಡಿಸಿದೆ.
ಲಾರ್ಡ್ಸ್ನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಹಿನ್ನಡೆ ಅನುಭವಿಸಿರೋದು ಸೋಲಿಗೆ ಪ್ರಮುಖ ಕಾರಣ. ಆದರೆ ಗೆಲುವಿನ ಹಾದಿಯಲ್ಲಿದ್ದ ಟೀಂ ಇಂಡಿಯಾ ದಿಢೀರ್ ಆಗಿ ಸೋಲಿನತ್ತ ವಾಲಿರೋದು ಯಾಕೆ ಅನ್ನೋದನ್ನ ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚೆಹಾಲ್ ಬಹಿರಂಗ ಪಡಿಸಿದ್ದಾರೆ.
ಪಂದ್ಯದ ಬಳಿಕ ಮಾಧ್ಯಮ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಚೆಹಾಲ್, ಭಾರತದ ಸೋಲಿಗೆ ವಿರಾಟ್ ಕೊಹ್ಲಿ ವಿಕೆಟ್ ಪತನವೇ ಕಾರಣವಾಯಿತು ಎಂದಿದ್ದಾರೆ. ಕೊಹ್ಲಿ ಔಟಾದ ಬಳಿಕ ಟೀಂ ಇಂಡಿಯಾದ ಒತ್ತಡ ಹೆಚ್ಚಾಯಿತು. ಹೀಗಾಗಿ ಉಳಿದ ಬ್ಯಾಟ್ಸ್ಮನ್ಗಳು ರನ್ಗಳಿಸಲು ಸಾಧ್ಯವಾಗಿಲ್ಲ ಎಂದಿದ್ದಾರೆ.
ಜೋ ರೂಟ್ ಶತಕ, ಹಾಗೂ ಟೀಂ ಇಂಡಿಯಾ ಡೆತ್ ಓವರ್ನಲ್ಲಿ ದುಬಾರಿಯಾಯಿತು. ಮುಂದಿನ ಪಂದ್ಯದಲ್ಲಿ ಇವೆಲ್ಲವನ್ನೂ ಸರಿದೂಗಿಸಿಕೊಂಡು ಕಣಕ್ಕಿಳಿಯಲಿದ್ದೇವೆ ಎಂದು ಚೆಹಾಲ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.