ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಯಡಿಯೂರಪ್ಪ

Published : Jan 22, 2021, 10:39 PM ISTUpdated : Jan 22, 2021, 10:42 PM IST
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಯಡಿಯೂರಪ್ಪ

ಸಾರಾಂಶ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಹಿಂಪಡೆಯುವ ಮೂಲಕ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ.

ಬೆಂಗಳೂರು, (ಜ.22): 2021ನೇ ಸಾಲಿನಲ್ಲಿ  ಸರ್ಕಾರಿ‌ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದು ಆದೇಶವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಾಪಸ್ ಪಡೆದಿದ್ದಾರೆ. ಇದಿರಂದ ರಾಜ್ಯ ಸರ್ಕಾರಿ‌ ನೌಕರರಿಗೆ ಸಂತಸ ತಂದಿದೆ.

ಬೆಂಗಳೂರು: 2021ನೇ ಸಾಲಿನ ಸರ್ಕಾರಿ ನೌಕರರ ಗಳಿಕೆ ರಜೆ ಕಡತ ಪರಿಶೀಲಿಸಿದ ಸಿಎಂ, ಸರ್ಕಾರಿ ನೌಕರರ ಸಂಘದ ಕೋರಿಕೆಯನ್ನು ಮಾನ್ಯ ಮಾಡಿ ಈ ಹಿಂದಿನ ಹಳೇ ಆದೇಶವನ್ನು ಹಿಂಪಡೆದಿದ್ದಾರೆ.

ರಾಜ್ಯದ ನೌಕರರಿಗೆ ಬಿಗ್ ಶಾಕ್ ಕೊಟ್ಟ ಯಡಿಯೂರಪ್ಪನವರ ಸರ್ಕಾರ

\ಕೋವಿಡ್-19 ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಾರಣ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು.

ಇದರಿಂದ ಸರ್ಕಾರಿ ನೌಕರರ 15 ದಿನಗಳ ಗಳಿಕೆ ರಜೆಯನ್ನು ನಗದೀಕರಿಸುವ ಅವಕಾಶ ತಡೆಹಿಡಿಯಲಾಗಿತ್ತು. ಅದನ್ನು 2021ನೇ ಸಾಲಿಗೂ ವಿಸ್ತರಿಸಿತ್ತು. ಸರ್ಕಾರಿ ನೌಕರರ ಸಂಘ ಈ ತೀರ್ಮಾನ ರದ್ದು ಮಾಡುವಂತೆ ಆಗ್ರಹಿಸಿತ್ತು.

PREV
click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!