ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ ಕೊಟ್ಟ ಯಡಿಯೂರಪ್ಪ ಸರ್ಕಾರ

Published : Jun 27, 2020, 08:31 PM ISTUpdated : Jun 27, 2020, 08:36 PM IST
ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ ಕೊಟ್ಟ ಯಡಿಯೂರಪ್ಪ ಸರ್ಕಾರ

ಸಾರಾಂಶ

ಕೊರೋನಾ ಆರ್ಭಟದ ನಡುವೆ ರಾಜ್ಯ ಸರ್ಕಾರಿ ನೌಕರರರಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಸರ್ಕಾರ ಸಿಹಿಸುದ್ದಿ ನೀಡಿದೆ.

ಬೆಂಗಳೂರು, (ಜೂನ್.27) : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಇನ್ಮುಂದೆ ವಾರದಲ್ಲಿ 5  ದಿನ ಮಾತ್ರ ಕೆಲಸ ಮಾಡಬಹುದು. 

ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಪ್ರತಿ ಶನಿವಾರ ಹಾಗೂ ಭಾನುವಾರ ರಾಜ್ಯ ಸರ್ಕಾರಿ ನೌಕರರಿಗೆ ರಜೆ ಭಾಗ್ಯ ಸಿಗಲಿದೆ. 

ವಾರದಲ್ಲಿ 1 ದಿನ ಮದ್ಯ ಸಿಗಲ್ಲ, ಆ ಒನ್ ಡೇ ಕುಡುಕರು ಶಾಂತತೆಯಿಂದ ಇರ್ಬೇಕು..!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಕೇಸ್ ಹೆಚ್ಚಾಗುತ್ತಿರುವುದರಿಂದ ಜುಲೈ 5ರಿಂದ ಪ್ರತಿ ಭಾನುವಾರ ಲಾಕ್‌ಡೌನ್‌ ಮಾಡಲು ಸರ್ಕಾರ ತೀರ್ಮಾನಿಸಿದೆ.  ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ.

ಅಲ್ಲದೇ  ಪ್ರತಿ ಶನಿವಾರ ಹಾಗೂ ಭಾನುವಾರ ರಾಜ್ಯ ಸರ್ಕಾರಿ ನೌಕರರಿಗೆ ರಜೆ ನೀಡಿದ್ದು, ಇದರಿಂದ ನೌಕರರಿಗೆ ರಿಲೀಫ್ ಸಿಕ್ಕಂತಾಗಿದೆ.

PREV
click me!

Recommended Stories

Rohini Vs Roopa: ವೃತ್ತಿ ಜೀವನ ಹೀಗೆ ಮಾಡ್ಕೊಬೇಡಿ? ರೋಹಿಣಿ ಸಿಂಧೂರಿ, ರೂಪಾ ಮೌದ್ಗಿಲ್‌ಗೆ ಕಿವಿ ಹಿಂಡಿದ ಸುಪ್ರೀಂ!
ಆರೋಗ್ಯ ಇಲಾಖೆಗೆ ಸಚಿವ ಯು.ಟಿ. ಖಾದರ್ 'ಮೇಜರ್ ಸರ್ಜರಿ': 1280 ವೈದ್ಯರ ನೇಮಕ, ಗುತ್ತಿಗೆ ನೌಕರರು ಖಾಯಂ!