ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ ಕೊಟ್ಟ ಯಡಿಯೂರಪ್ಪ ಸರ್ಕಾರ

Published : Jun 27, 2020, 08:31 PM ISTUpdated : Jun 27, 2020, 08:36 PM IST
ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ ಕೊಟ್ಟ ಯಡಿಯೂರಪ್ಪ ಸರ್ಕಾರ

ಸಾರಾಂಶ

ಕೊರೋನಾ ಆರ್ಭಟದ ನಡುವೆ ರಾಜ್ಯ ಸರ್ಕಾರಿ ನೌಕರರರಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಸರ್ಕಾರ ಸಿಹಿಸುದ್ದಿ ನೀಡಿದೆ.

ಬೆಂಗಳೂರು, (ಜೂನ್.27) : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಇನ್ಮುಂದೆ ವಾರದಲ್ಲಿ 5  ದಿನ ಮಾತ್ರ ಕೆಲಸ ಮಾಡಬಹುದು. 

ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಪ್ರತಿ ಶನಿವಾರ ಹಾಗೂ ಭಾನುವಾರ ರಾಜ್ಯ ಸರ್ಕಾರಿ ನೌಕರರಿಗೆ ರಜೆ ಭಾಗ್ಯ ಸಿಗಲಿದೆ. 

ವಾರದಲ್ಲಿ 1 ದಿನ ಮದ್ಯ ಸಿಗಲ್ಲ, ಆ ಒನ್ ಡೇ ಕುಡುಕರು ಶಾಂತತೆಯಿಂದ ಇರ್ಬೇಕು..!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಕೇಸ್ ಹೆಚ್ಚಾಗುತ್ತಿರುವುದರಿಂದ ಜುಲೈ 5ರಿಂದ ಪ್ರತಿ ಭಾನುವಾರ ಲಾಕ್‌ಡೌನ್‌ ಮಾಡಲು ಸರ್ಕಾರ ತೀರ್ಮಾನಿಸಿದೆ.  ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ.

ಅಲ್ಲದೇ  ಪ್ರತಿ ಶನಿವಾರ ಹಾಗೂ ಭಾನುವಾರ ರಾಜ್ಯ ಸರ್ಕಾರಿ ನೌಕರರಿಗೆ ರಜೆ ನೀಡಿದ್ದು, ಇದರಿಂದ ನೌಕರರಿಗೆ ರಿಲೀಫ್ ಸಿಕ್ಕಂತಾಗಿದೆ.

PREV
click me!

Recommended Stories

ಅಡುಗೆ, ಮನೆಗೆಲಸ ಮಾಡುವ ಹೆಂಡತಿಗೆ ತಿಂಗಳ ಸಂಬಳ ಕೊಡುವ ಗಂಡ; ಅಸಲಿ ಕಾರಣ ಕೇಳಿದ್ರೆ ಸಲಾಂ ಅಂತೀರಾ!
KPSC KAS ನೇಮಕಾತಿ 2026: 319 ಗ್ರೂಪ್ ‘ಎ’ & ‘ಬಿ’ ಗೆಜೆಟೆಡ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ