ರಾಜ್ಯದ ನೌಕರರಿಗೆ ಬಿಗ್ ಶಾಕ್ ಕೊಟ್ಟ ಯಡಿಯೂರಪ್ಪನವರ ಸರ್ಕಾರ

Published : Jan 04, 2021, 08:55 PM ISTUpdated : Jan 04, 2021, 09:03 PM IST
ರಾಜ್ಯದ ನೌಕರರಿಗೆ ಬಿಗ್ ಶಾಕ್ ಕೊಟ್ಟ ಯಡಿಯೂರಪ್ಪನವರ ಸರ್ಕಾರ

ಸಾರಾಂಶ

ಸರ್ಕಾರದಿಂದ ಸಹಾಯಾನುದಾನ / ಅನುದಾನ ಪಡೆಯುವ ಅಥವಾ ಪಡೆಯದಿರುವ ಎಲ್ಲಾ ಕರ್ನಾಟಕ ಸರ್ಕಾರದ ಎಲ್ಲಾ ಉದ್ಯಮಗಳ ಸಂಸ್ಥೆಗಳ ನೌಕರರಿ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ.

ಬೆಂಗಳೂರು, (ಜ.04): 2021ನೇ ಸಾಲಿನಲ್ಲಿ  ಸರ್ಕಾರಿ‌ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದು ಪಡಿಸಲಾಗಿದೆ. 

ಪ್ರಸ್ತುತ ಕೋವಿಡ್-19 ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಾರಣ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಗಂಗೂಲಿ ಚಿಕಿತ್ಸೆಗೆ ದೇವಿಶೆಟ್ಟಿಗೆ ಆಹ್ವಾನ, ವಿದ್ಯಾರ್ಥಿನಿಯರಿಗೆ ಪೋತ್ಸಾಹಧನ; ಜ.4ರ ಟಾಪ್ 10 ಸುದ್ದಿ!

ಜೊತೆಗೆ, ಈ ವರ್ಷ ನಿವೃತ್ತಿ ಹೊಂದುವ ಎಲ್ಲಾ ಅರ್ಹ ನೌಕರರು ಮತ್ತು ಅಧಿಕಾರಿಗಳು ನಿವೃತ್ತಿ ಹೊಂದುವ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಲು ಅರ್ಹರು ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಸರ್ಕಾರದ ಈ ಆದೇಶವು ಸರ್ಕಾರದಿಂದ ಸಹಾಯಾನುದಾನ / ಅನುದಾನ ಪಡೆಯುವ ಅಥವಾ ಪಡೆಯದಿರುವ ಎಲ್ಲಾ ಕರ್ನಾಟಕ ಸರ್ಕಾರದ ಎಲ್ಲಾ ಉದ್ಯಮಗಳ ಸಂಸ್ಥೆಗಳ ನೌಕರರಿಗೂ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

PREV
click me!

Recommended Stories

ಡಿಆರ್‌ಡಿಒ ಇಂಜಿನಿಯರ್‌ಗಳಿಗೆ ಅಚ್ಚರಿಯ ಕರೆ! ಬೆಂಗಳೂರಿನಲ್ಲಿರುವ CABS ವಿಭಾಗದ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿಡ್ಲಘಟ್ಟ ಪೌರಾಯುಕ್ತೆಗೆ ರೌಡಿ ದರ್ಪ ತೋರಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನಿಂದ ಕ್ಷಮೆ ಕೇಳಿಸಿದ ಸುವರ್ಣ ನ್ಯೂಸ್!