ರಾಜ್ಯದ ನೌಕರರಿಗೆ ಬಿಗ್ ಶಾಕ್ ಕೊಟ್ಟ ಯಡಿಯೂರಪ್ಪನವರ ಸರ್ಕಾರ

Published : Jan 04, 2021, 08:55 PM ISTUpdated : Jan 04, 2021, 09:03 PM IST
ರಾಜ್ಯದ ನೌಕರರಿಗೆ ಬಿಗ್ ಶಾಕ್ ಕೊಟ್ಟ ಯಡಿಯೂರಪ್ಪನವರ ಸರ್ಕಾರ

ಸಾರಾಂಶ

ಸರ್ಕಾರದಿಂದ ಸಹಾಯಾನುದಾನ / ಅನುದಾನ ಪಡೆಯುವ ಅಥವಾ ಪಡೆಯದಿರುವ ಎಲ್ಲಾ ಕರ್ನಾಟಕ ಸರ್ಕಾರದ ಎಲ್ಲಾ ಉದ್ಯಮಗಳ ಸಂಸ್ಥೆಗಳ ನೌಕರರಿ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ.

ಬೆಂಗಳೂರು, (ಜ.04): 2021ನೇ ಸಾಲಿನಲ್ಲಿ  ಸರ್ಕಾರಿ‌ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದು ಪಡಿಸಲಾಗಿದೆ. 

ಪ್ರಸ್ತುತ ಕೋವಿಡ್-19 ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಾರಣ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಗಂಗೂಲಿ ಚಿಕಿತ್ಸೆಗೆ ದೇವಿಶೆಟ್ಟಿಗೆ ಆಹ್ವಾನ, ವಿದ್ಯಾರ್ಥಿನಿಯರಿಗೆ ಪೋತ್ಸಾಹಧನ; ಜ.4ರ ಟಾಪ್ 10 ಸುದ್ದಿ!

ಜೊತೆಗೆ, ಈ ವರ್ಷ ನಿವೃತ್ತಿ ಹೊಂದುವ ಎಲ್ಲಾ ಅರ್ಹ ನೌಕರರು ಮತ್ತು ಅಧಿಕಾರಿಗಳು ನಿವೃತ್ತಿ ಹೊಂದುವ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಲು ಅರ್ಹರು ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಸರ್ಕಾರದ ಈ ಆದೇಶವು ಸರ್ಕಾರದಿಂದ ಸಹಾಯಾನುದಾನ / ಅನುದಾನ ಪಡೆಯುವ ಅಥವಾ ಪಡೆಯದಿರುವ ಎಲ್ಲಾ ಕರ್ನಾಟಕ ಸರ್ಕಾರದ ಎಲ್ಲಾ ಉದ್ಯಮಗಳ ಸಂಸ್ಥೆಗಳ ನೌಕರರಿಗೂ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

PREV
click me!

Recommended Stories

Rohini Vs Roopa: ವೃತ್ತಿ ಜೀವನ ಹೀಗೆ ಮಾಡ್ಕೊಬೇಡಿ? ರೋಹಿಣಿ ಸಿಂಧೂರಿ, ರೂಪಾ ಮೌದ್ಗಿಲ್‌ಗೆ ಕಿವಿ ಹಿಂಡಿದ ಸುಪ್ರೀಂ!
ಆರೋಗ್ಯ ಇಲಾಖೆಗೆ ಸಚಿವ ಯು.ಟಿ. ಖಾದರ್ 'ಮೇಜರ್ ಸರ್ಜರಿ': 1280 ವೈದ್ಯರ ನೇಮಕ, ಗುತ್ತಿಗೆ ನೌಕರರು ಖಾಯಂ!