ಕೊರೋನಾ ಬಗ್ಗೆ ಶಾಸಕರೊಬ್ಬರು ಹೇಳಿದ ವಿಷಯ ಕೇಳಿ ಹೌಹಾರಿದ ಕಮಿಟಿಯ ಸದಸ್ಯರು...!

Published : Aug 11, 2020, 05:19 PM ISTUpdated : Aug 11, 2020, 05:25 PM IST
ಕೊರೋನಾ ಬಗ್ಗೆ ಶಾಸಕರೊಬ್ಬರು ಹೇಳಿದ ವಿಷಯ ಕೇಳಿ ಹೌಹಾರಿದ ಕಮಿಟಿಯ ಸದಸ್ಯರು...!

ಸಾರಾಂಶ

ರಾಜ್ಯ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಸಭೆ ನಡೆದಿದ್ದು, ಶಾಸಕ ಸತೀಶ್ ರೆಡ್ಡಿ ಪ್ರಸ್ತಾಪಿಸಿದ ವಿಷಯವನ್ನು ಕೇಳಿಯೇ  ಸಭೆಯಲ್ಲಿದ್ದ ಕಮಿಟಿ ಸದಸ್ಯರು ಸುಸ್ತಾಗಿ ಹೋಗಿದ್ದಾರೆ.

ಬೆಂಗಳೂರು, (ಆ.11): ಇಂದು (ಮಂಗಳವಾರ) ವಿಧಾನಸೌಧದಲ್ಲಿ ರಾಜ್ಯ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಶಾಸಕ ಸತೀಶ್ ರೆಡ್ಡಿ ಅವರು ಕೊರೋನಾ ಬಗ್ಗೆ ಹೊರ ಹಾಕಿದ ವಿಷಯ ಕೇಳಿ ಕಮಿಟಿಯ ಸದಸ್ಯರು ದಂಗಾಗಿದ್ದಾರೆ.

ಸಭೆ ಬಳಿಕ ಬಿಜೆಪಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಬೊಮ್ಮಹನಳ್ಳಿ ಶಾಸಕ ಸತೀಶ್ ರೆಡ್ಡಿ ಪ್ರಸ್ತಾಪಿಸಿದ ಈ ವಿಷಯವನ್ನು ಕೇಳಿಯೇ  ಸಭೆಯಲ್ಲಿದ್ದ ಕಮಿಟಿ ಸದಸ್ಯರು ಸುಸ್ತಾಗಿ ಹೋಗಿದ್ದಾರೆ ಎಂದರು.

ಕಾಶ್ಮೀರದ ಮತ್ತೊಂದು ನಿಷೇಧ ವಾಪಸ್, ವಿಶ್ವ ಕ್ರಿಕೆಟ್‌ಗೆ ಕೊಹ್ಲಿ ಬಾಸ್; ಆ.11ರ ಟಾಪ್ 10 ಸುದ್ದಿ!

ಕೊರೋನಾ ಪೇಶೆಂಟ್ ವೆಂಟಿಲೇಟರ್‌ಗೆ ಹೋದ್ರೆ ಭಾರೀ ಡೇಂಜರ್. ವೆಂಟಿಲೇಟರ್ ಹೋದವರು ಬದುಕುವುದು ಕಷ್ಟ. ಬೆಂಗಳೂರಿನಲ್ಲಿ ವೆಂಟಿಲೇಟರ್‌ಗೆ ಹೋದವರು ವಾಪಸ್ ಬಂದಿದ್ದು ಕಡಿಮೆಯಂತೆ. ಪ್ರತಿ 10 ಮಂದಿ ಸೋಂಕಿತರಲ್ಲಿ 9 ಮಂದಿ ಸಾಯ್ತಿದ್ದಾರಂತೆ.  ಉಳಿಯೋದು ಕೇವಲ ಒಬ್ಬ ಪೇಶೆಂಟ್ ಮಾತ್ರವಂತೆ ಎಂದು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಸಭೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ನಡಹಳ್ಳಿ ಮಾಧ್ಯಮಗಳ ಮುಂದೆ ತಿಳಿಸಿದರು.

PREV
click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!