
ಮೈಸೂರು(ಸೆ. 29): ಕೋವಿಡ್ನಿಂದ(Covid19) ಮೃತಪಟ್ಟ ಬಿಪಿಎಲ್ ಮತ್ತು ಬಿಪಿಎಲ್ಯೇತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ನೀಡುವ ಪರಿಹಾರ ಮೊತ್ತದಲ್ಲಿ ಬದಲಾವಣೆ ಮಾಡಿದ್ದು, ಬಿಪಿಎಲ್ ಕುಟುಂಬದ ವ್ಯಕ್ತಿಗೆ ನೀಡುವ ಪರಿಹಾವನ್ನು ಒಂದು ಲಕ್ಷ ರು.ನಿಂದ 1.50 ಲಕ್ಷ ರು.ಗೆ ಹೆಚ್ಚಳ ಮಾಡಲಾಗಿದೆ. ಇದೇ ವೇಳೆ ಬಿಪಿಎಲ್ಯೇತರ ಕುಟುಂಬಕ್ಕೆ 50 ಸಾವಿರ ರು. ಪರಿಹಾರವನ್ನು ಹೊಸದಾಗಿ ಘೋಷಿಸಿ ಆದೇಶ ಹೊರಡಿಸಿದೆ.
ಬಿಪಿಎಲ್(BPL) ಕುಟುಂಬದವರಿಗೆ ರಾಜ್ಯ ಸರ್ಕಾರದ ಸಂಧ್ಯಾ ಸುರಕ್ಷಾ ಯೋಜನೆಯಡಿ ಒಂದು ಲಕ್ಷ ರು. ಮತ್ತು ಎಸ್ಡಿಆರ್ಎಫ್ನಿಂದ 50 ಸಾವಿರ ರು. ಸೇರಿ 1.50 ಲಕ್ಷ ರು. ನೀಡಲಾಗುತ್ತದೆ. ಬಿಪಿಎಲ್ ಕುಟುಂಬದ ಒಂದಕ್ಕಿಂತ ಹೆಚ್ಚು ಮಂದಿ ಕೋವಿಡ್ನಿಂದ ಮೃತಪಟ್ಟಿದ್ದರೆ ಆಗ ಮೊದಲ ವ್ಯಕ್ತಿಗೆ 1.50 ಲಕ್ಷ ರು. ಹಾಗೂ ಉಳಿದವರಿಗೆ ತಲಾ 50 ಸಾವಿರ ರು. ಪರಿಹಾರ ದೊರೆಯುತ್ತದೆ. ಇನ್ನು, ಬಿಪಿಎಲ್ಯೇತರ ಕುಟುಂಬದಲ್ಲಿ ಕೋವಿಡ್ನಿಂದ ಸಾವನ್ನಪ್ಪಿದ್ದರೆ ತಲಾ 50 ಸಾವಿರ ರು. ಪರಿಹಾರ(Compensation) ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೊರೋನಾ ಬಗ್ಗೆ ಮತ್ತಷ್ಟು ನಿಗಾವಹಿಸಲು ಸೂಚನೆ: ಕೇಂದ್ರದಿಂದ ಬಂತು ಎಚ್ಚರಿಕೆ ಸಂದೇಶ
ಕೋವಿಡ್ನಿಂದ ಮೃತರಾದ ಬಿಪಿಎಲ್ ಕುಟುಂಬದವರಿಗೆ ಒಂದು ಲಕ್ಷ ರು. ನೀಡುವ ಆದೇಶವನ್ನು ಹಿಂಪಡೆದು ಕೆಲವೇ ಗಂಟೆಯಲ್ಲಿ ಪರಿಷ್ಕೃತ ಆದೇಶ ಹೊರಡಿಸಲಾಗಿದೆ. ಬಿಪಿಎಲ್ಯೇತರ ಕುಟುಂಬದಲ್ಲಿ ಒಂದು ಅಥವಾ ಒಂದಕ್ಕಿಂತ ಹೆಚ್ಚು ವ್ಯಕ್ತಿಗಳು ಮೃತಪಟ್ಟಿದ್ದರೆ ಎಸ್ಡಿಆರ್ಎಫ್ ಅಡಿ ಮೃತ ಸಂಖ್ಯೆಗನುಗುಣವಾಗಿ ತಲಾ 50 ಸಾವಿರ ರು. ಪಾವತಿಸಲಾಗುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ಎಲ್ಲಾ ತಾಲೂಕು ಕಚೇರಿ, ನಾಡ ಕಚೇರಿ ಮತ್ತು ಬಿಬಿಎಂಪಿ ವ್ಯಾಪ್ತಿಯ ವಾರ್ಡ್ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು. ವ್ಯಕ್ತಿಯು ರಾಜ್ಯದ ಯಾವುದೇ ಭಾಗದಲ್ಲಿ ಮೃತಪಟ್ಟಿದ್ದರೂ ಸಹ ಅರ್ಜಿದಾರರು ತಮ್ಮ ವಾಸಸ್ಥಳದ ವ್ಯಾಪ್ತಿಯಲ್ಲಿಯೇ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ