ನಿನ್ನೆ ರಾಜ್ಯದಲ್ಲಿ ಕೊರೋನಾಗೆ 1 ಬಲಿ: 6 ತಿಂಗಳ ನಂತರ ರಾಜ್ಯದಲ್ಲಿ ಕನಿಷ್ಠ ಸಾವು

Kannadaprabha News   | Asianet News
Published : Dec 25, 2020, 08:14 AM IST
ನಿನ್ನೆ ರಾಜ್ಯದಲ್ಲಿ ಕೊರೋನಾಗೆ 1 ಬಲಿ: 6 ತಿಂಗಳ ನಂತರ ರಾಜ್ಯದಲ್ಲಿ ಕನಿಷ್ಠ ಸಾವು

ಸಾರಾಂಶ

ನಿನ್ನೆ ರಾಜ್ಯದಲ್ಲಿ ಕೊರೋನಾಕ್ಕೆ 1 ಬಲಿ | 6 ತಿಂಗಳ ನಂತರ ರಾಜ್ಯದಲ್ಲಿ ಕನಿಷ್ಠ ಸಾವು | ಬೆಂಗಳೂರಲ್ಲಿ 1 ಸಾವು, ರಾಜ್ಯದ ಇನ್ನೆಲ್ಲೂ ಸಾವಿಲ್ಲ  

ಬೆಂಗಳೂರು(ಡಿ.25):ರಾಜ್ಯದಲ್ಲಿ ಗುರುವಾರ ಕೊರೋನಾ ಸೋಂಕಿನಿಂದ ಕೇವಲ ಒಬ್ಬರು ಮಾತ್ರ ಮರಣವನ್ನಪ್ಪಿದ್ದಾರೆ. ಇದು ಆರು ತಿಂಗಳ ನಂತರ (ಜೂನ್‌ ಮೂರು) ಬಳಿಕ ರಾಜ್ಯದಲ್ಲಿ ವರದಿಯಾಗಿರುವ ಕನಿಷ್ಠ ಪ್ರಮಾಣದ ಸಾವು. ಬೆಂಗಳೂರು ನಗರ ಜಿಲ್ಲೆಯಲ್ಲಿ ಈ ಏಕಮಾತ್ರ ಸಾವು ಸಂಭವಿಸಿದ್ದು ರಾಜ್ಯದ ಉಳಿದ ಭಾಗದಲ್ಲಿ ಯಾವುದೇ ಸಾವು ಸಂಭವಿಸಿಲ್ಲ.

ರಾಜ್ಯದಲ್ಲಿ ಗುರುವಾರ 1,143 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. 1,268 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 13,610 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 208 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬ್ರಿಟನ್‌ ವೈರಸ್‌ ರಾಜ್ಯಕ್ಕೆ ಬಂತಾ..? ಸೀಕ್ವೆನ್ಸ್ ವರದಿ ಪ್ರಕಟ

ರಾಜ್ಯದಲ್ಲಿ ಈವರೆಗೆ ಒಟ್ಟು 9.13 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 8.87 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು 12.039 ಮಂದಿ ಅಸುನೀಗಿದ್ದಾರೆ. ಗುರುವಾರ 98,724 ಮಂದಿ ಕೊರೋನಾ ಪರೀಕ್ಷೆಗೆ ಒಳಗಾಗಿದ್ದಾರೆ. 1.34 ಕೋಟಿ ಪರೀಕ್ಷೆಗಳನ್ನು ಈವರೆಗೆ ನಡೆಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 642, ಬಾಗಲಕೋಟೆ ಮತ್ತು ರಾಮನಗರ ತಲಾ 1, ಬಳ್ಳಾರಿ 28, ಬೆಳಗಾವಿ 21, ಬೆಂಗಳೂರು ಗ್ರಾಮಾಂತರ 15, ಬೀದರ್‌ 8, ಚಾಮರಾಜನಗರ 9, ಚಿಕ್ಕಬಳ್ಳಾಪುರ 27, ಚಿಕ್ಕಮಗಳೂರು 10, ಚಿತ್ರದುರ್ಗ 19, ದಕ್ಷಿಣ ಕನ್ನಡ 20, ದಾವಣಗೆರೆ 19, ಧಾರವಾಡ 15, ಗದಗ 10, ಹಾಸನ 27, ಹಾವೇರಿ 2, ಕಲಬುರಗಿ 18, ಕೊಡಗು 6, ಕೋಲಾರ 11, ಕೊಪ್ಪಳ 12, ಮಂಡ್ಯ 16, ಮೈಸೂರು 88, ರಾಯಚೂರು 14, ಶಿವಮೊಗ್ಗ 19, ತುಮಕೂರು 40, ಉತ್ತರ ಕನ್ನಡ 14, ಉಡುಪಿ 6, ವಿಜಯಪುರ 21 ಮತ್ತು ಯಾದಗಿರಿ ಜಿಲ್ಲೆಯಲ್ಲಿ ನಾಲ್ವರಲ್ಲಿ ಸೋಂಕು ಧೃಢ ಪಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್