ಚಿಕಿತ್ಸೆ ನಿರಾಕರಿಸಿದರೆ 1 ವರ್ಷ ಜೈಲು ಶಿಕ್ಷೆ..!

Published : Jul 17, 2020, 07:29 AM ISTUpdated : Jul 17, 2020, 01:33 PM IST
ಚಿಕಿತ್ಸೆ ನಿರಾಕರಿಸಿದರೆ 1 ವರ್ಷ ಜೈಲು ಶಿಕ್ಷೆ..!

ಸಾರಾಂಶ

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುತ್ತಿವೆ ಎಂಬ ದೂರುಗಳ ನಡುವೆಯೇ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ. ‘ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ವೈದ್ಯರು ಮತ್ತು ನರ್ಸ್‌ಗಳಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುವ ಕಠಿಣ ಕಾನೂನು ಪ್ರಯೋಗಿಸಲಾಗುವುದು’ ಎಂದು ಕಂದಾಯ ಸಚಿವ ಆರ್‌. ಅಶೋಕ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು(ಜು.17): ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುತ್ತಿವೆ ಎಂಬ ದೂರುಗಳ ನಡುವೆಯೇ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ. ‘ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ವೈದ್ಯರು ಮತ್ತು ನರ್ಸ್‌ಗಳಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುವ ಕಠಿಣ ಕಾನೂನು ಪ್ರಯೋಗಿಸಲಾಗುವುದು’ ಎಂದು ಕಂದಾಯ ಸಚಿವ ಆರ್‌. ಅಶೋಕ ಎಚ್ಚರಿಕೆ ನೀಡಿದ್ದಾರೆ.

"

ಕೊರೋನಾ ಸೋಂಕು ನಿಯಂತ್ರಣ ಕುರಿತು ಗುರುವಾರ ಬೆಂಗಳೂರು ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬರುವ ವಿವಿಧ ಆಸ್ಪತ್ರೆಯ ಮುಖ್ಯಸ್ಥರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅಶೋಕ್‌ ಈ ವೇಳೆ ಸದರಿ ಎಚ್ಚರಿಕೆ ನೀಡಿದರು.

ಚೀನಾ ಕಂಪನಿಯಿಂದ ನೌಕರರ ಮೇಲೇ ಕೊರೋನಾ ಲಸಿಕೆ ಪ್ರಯೋಗ!

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲವು ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರಿಗೆ ವೈದ್ಯರು ಮತ್ತು ನರ್ಸ್‌ಗಳು ಚಿಕಿತ್ಸೆ ನೀಡಲು ನಿರಾಕರಿಸುತ್ತಿದ್ದಾರೆ ಎಂಬ ವರದಿಗಳಿವೆ. ಇಂತಹ ವೈದ್ಯರು ಮತ್ತು ನರ್ಸ್‌ಗಳ ವಿರುದ್ಧ ಒಂದು ವರ್ಷ ಜೈಲು ಶಿಕ್ಷೆ ವಿಧಿಸುವಂತಹ ವಿಧಿಸುವ ಅವಕಾಶ ಕಾನೂನಿನಲ್ಲಿ (ವಿಪತ್ತು ನಿರ್ವಹಣಾ ಕಾಯ್ದೆ, ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ) ಇದೆ. ಅದನ್ನು ಪ್ರಯೋಗಿಸಲಾಗುವುದು’ ಎಂದರು.

‘ಖಾಸಗಿ ಆಸ್ಪತ್ರೆಯಲ್ಲಿ ಶೇ.50ರಷ್ಟುಹಾಸಿಗೆಯನ್ನು ಮೀಸಲಿಟ್ಟು ಕೊರೋನಾ ಸೋಂಕಿತ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಒಂದು ವೇಳೆ ನೀಡದಿದ್ದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

50 ಸಾವಿರ ದಾಟಿದ ಕರ್ನಾಟಕ, ಬೆಂಗಳೂರು ಗಂಡಾಂತರ

‘ಇನ್ನು ಖಾಸಗಿ ಆಸ್ಪತ್ರೆಯವರು ಸೋಂಕಿತ ವ್ಯಕ್ತಿಗೆ ಬಿಯು ಸಂಖ್ಯೆ (ಬೆಂಗಳೂರು ನಗರ ಕೊರೋನಾ ಸೋಂಕು ಸಂಖ್ಯೆ) ತೆಗೆದುಕೊಂಡು ಬನ್ನಿ ಎನ್ನುವಂತಿಲ್ಲ, ರೋಗಿ ಆಸ್ಪತ್ರೆಗೆ ಬಂದರೆ ಅವರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು. ಆನಂತರವೇ ಬಿಬಿಎಂಪಿಗೆ ಮಾಹಿತಿ ನೀಡಬೇಕು. ಈ ಬಗ್ಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ’ ಎಂದು ತಿಳಿಸಿದರು.

ವೈದ್ಯ ಸಿಬ್ಬಂದಿ ಕ್ವಾರಂಟೈನ್‌ಗೆ ವ್ಯವಸ್ಥೆ:

‘ಕೆಲವು ವೈದ್ಯರು ಮತ್ತು ನರ್ಸ್‌ಗಳು ಏಳು ದಿನ ಕೆಲಸ ಮಾಡಬೇಕು. ಏಳು ದಿನ ಕ್ವಾರಂಟೈನ್‌ನಲ್ಲಿ ಇರಬೇಕು. ಇದರಿಂದ ಮನೆಗೆ ಹೋಗುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಸಮಸ್ಯೆ ಹೇಳಿಕೊಂಡಿದ್ದಾರೆ. ಅಂತಹ ವೈದ್ಯರು ಹಾಗೂ ನರ್ಸ್‌ಗಳಿಗೆ ಆಸ್ಪತ್ರೆಯ ಸಮೀಪದಲ್ಲಿ ಹೋಟೆಲ್‌ ವ್ಯವಸ್ಥೆ ಮಾಡಿಕೊಡುವಂತೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

KSRTC ಪ್ರಯಾಣಿಕರಿಗೆ ಬಿಗ್ ಶಾಕ್! ಇಂಧನ ಬೆಲೆ ಏರಿಕೆ ನೆಪ, ಶೀಘ್ರ ಬಸ್‌ ದರ ಹೆಚ್ಚಳ, ಸಾರಿಗೆ ಸಚಿವ ಮಹತ್ವದ ಸುಳಿವು
80ನೇ ಸ್ವಾತಂತ್ರ್ಯ ದಿನ: 72,000 ಸರ್ಕಾರಿ ನೌಕರಿ, ಉಚಿತ ಕೋಡಿಂಗ್, AI ವಿವಿ ಘೋಷಿಸಿದ ಸಿಎಂ ಡಿ.ಕೆ.ಶಿವಕುಮಾರ್!