
ಬೆಂಗಳೂರು (ಜೂ.5): ಆರ್ಸಿಬಿ ಇವೆಂಟ್ನಲ್ಲಿ 11 ಜನ ಅಮಾಯಕರು ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದಾಗಿ ದಾರುಣವಾಗಿ ಕಾಲ್ತುಳಿತದಲ್ಲಿ ಸಾವು ಕಂಡಿದ್ದಾರೆ. ಇದರ ಬೆನ್ನಲ್ಲಿಯೇ ರಾಜ್ಯದ ಉಪಮುಖ್ಯಮಂತ್ರಿ ಜನರಿಗೆ ಹೇಳಿದ ಸುಳ್ಳು ಕೂಡ ಬಟಾಬಯಲಾಗಿದೆ. ಬುಧವಾರ ದಾರುಣ ಘಟನೆ ನಡೆದ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಸರ್ಕಾರ ಎಲ್ಲಾ ರೀತಿಯ ಭದ್ರತೆ ಕಲ್ಪಿಸಿತ್ತು. ಒಟ್ಟು 5 ಸಾವಿರ ಮಂಡಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು ಎಂದಿದ್ದರು.
ಆದರೆ, ಈ ಮಾಹಿತಿ ಸುಳ್ಳು ಎನ್ನುವುದನ್ನು ಸರ್ಕಾರವೇ ಗುರುವಾರ ಕೋರ್ಟ್ಗೆ ತಿಳಿಸಿದೆ. 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತದ ದಿನದಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಗರ ಪೊಲೀಸ್ ಆಯುಕ್ತರು, ಡಿಸಿಪಿಗಳು ಮತ್ತು ಎಸಿಪಿಗಳು ಸೇರಿದಂತೆ 1,000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಎಂದು ಕರ್ನಾಟಕ ಸರ್ಕಾರ ಗುರುವಾರ ಹೈಕೋರ್ಟ್ಗೆ ತಿಳಿಸಿದೆ. ಆದರೆ, ಬುಧವಾರ ಇಡೀ ದಿನ ಡಿಸಿಎಂ ಡಿಕೆ ಶಿವಕುಮಾರ್,ಜನಸಂದಣಿಯನ್ನು ನಿರ್ವಹಿಸಲು 5,000 ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿತ್ತು ಎಂದೇ ಹೇಳುತ್ತಿದ್ದರು.
ನೀರಿನ ಟ್ಯಾಂಕರ್ಗಳು, ಆಂಬ್ಯುಲೆನ್ಸ್ಗಳು ಮತ್ತು ಕಮಾಂಡ್ ಮತ್ತು ಕಂಟ್ರೋಲ್ ವಾಹನಗಳು ಸಹ ಇದ್ದವು ಮತ್ತು ಇದು ಹಿಂದಿನ ಪಂದ್ಯಗಳಿಗೆ ಮಾಡಿದ್ದ ವ್ಯವಸ್ಥೆಗಿಂತ ಹೆಚ್ಚಿನ ವ್ಯವಸ್ಥೆಯನ್ನು ಈ ಬಾರಿ ಮಾಡಲಾಗಿತ್ತು ಎಂದಿದೆ.
ಇದರ ಹೊರತಾಗಿಯೂ, 2.5 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಿದ್ದರಿಂದ ಪರಿಸ್ಥಿತಿ ಉಲ್ಬಣಗೊಂಡಿತು ಎಂದು ರಾಜ್ಯ ಹೇಳಿದೆ, ಅವರಲ್ಲಿ ಹಲವರು ಕ್ರೀಡಾಂಗಣಕ್ಕೆ ಉಚಿತ ಪ್ರವೇಶವಿದೆ ಎಂದು ನಂಬಿದ್ದರು. ಕ್ರೀಡಾಂಗಣವು 35,000 ಸಾಮರ್ಥ್ಯವನ್ನು ಹೊಂದಿದೆ ಮತ್ತು ಸಾಮಾನ್ಯವಾಗಿ, ಕೇವಲ 30,000 ಟಿಕೆಟ್ಗಳು ಮಾತ್ರ ಮಾರಾಟವಾಗುತ್ತವೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಪೀಠದ ಮುಂದೆ ಹಾಜರಾದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, "ನಾವು ಪ್ರತಿಕೂಲವಾದ ವಿಧಾನವನ್ನು ತೆಗೆದುಕೊಳ್ಳುತ್ತಿಲ್ಲ. ನ್ಯಾಯಾಲಯವು ಯಾವುದೇ ನಿರ್ದೇಶನ ನೀಡಿದರೂ, ನಾವು ಕ್ರಮ ಕೈಗೊಳ್ಳಲು ಸಿದ್ಧರಿದ್ದೇವೆ" ಎಂದು ಹೇಳಿದರು.
ಇಷ್ಟು ದೊಡ್ಡ ಜನಸಂದಣಿಯನ್ನು ನಿರ್ವಹಿಸಲು ಯಾವ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳು (SOP ಗಳು) ಜಾರಿಯಲ್ಲಿವೆ ಎಂದು ನ್ಯಾಯಾಲಯ ಕೇಳಿತು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ