
ಬೆಂಗಳೂರು, (ಸೆ.17): ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಇಂದು (ಸೆ.17) ಹೊಸದಾಗಿ 1003 ಜನರಿಗೆ ಕೊರೋನಾ ದೃಢಪಟ್ಟಿದೆ.
ಇನ್ನು 18 ಜನ ಸೋಂಕಿತರು ಮೃತಪಟ್ಟಿದ್ದು, 1199 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಮೆಘಾ ವ್ಯಾಕ್ಸಿನೇಶನ್: ಒಂದೇ ದಿನ 2 ಕೋಟಿ ಲಸಿಕೆ ಡೋಸ್ ಮೂಲಕ ಯೂರೋಪ್ ಹಿಂದಿಕ್ಕಿದ ಭಾರತ!
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,66,194 ಕ್ಕೆ ಏರಿಕೆಯಾಗಿದ್ರೆ, ಇದುವರೆಗೆ 37,573 ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 29,12,633 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 15,960 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 6 ರಷ್ಟು ಇದೆ.
ಬೆಂಗಳೂರಿನಲ್ಲಿ ಇಂದು(ಶುಕ್ರವಾರ) ಹೊಸದಾಗಿ 310 ಜನರಿಗೆ ಸೋಂಕು ತಗುಲಿದ್ದು, 6 ಜನ ಮೃತಪಟ್ಟಿದ್ದಾರೆ. 276 ಮಂದಿ ಗುಣಮುಖರಾಗಿದ್ದು, 7456 ಸಕ್ರಿಯ ಪ್ರಕರಣಗಳು ಇವೆ.
ಜಿಲ್ಲಾವಾರು ಸೋಂಕಿತರ ಸಂಖ್ಯೆ
ಬಾಗಲಕೋಟೆ 0, ಬಳ್ಳಾರಿ 4, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 5, ದಾವಣಗೆರೆ 3, ಗದಗ 1, ಹಾವೇರಿ 0, ಕಲಬುರ್ಗಿ 5, ಕೊಪ್ಪಳ 0, ರಾಯಚೂರು 3, ರಾಮನಗರ 2, ವಿಜಯಪುರ 0, ಯಾದಗಿರಿ 2, ಬೆಂಗಳೂರು 310, ದಕ್ಷಿಣಕನ್ನಡ 124, ಹಾಸನ 48, ಕೊಡಗು 96, ಮೈಸೂರು 46, ತುಮಕೂರು 61, ಉಡುಪಿ 94.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ