1 ಐಪಿಎಲ್ ಟಿಕೆಟ್ ₹20,000! ಬ್ಲ್ಯಾಕ್‌ ಟಿಕೆಟ್ ಮಾರುತ್ತಿದ್ದ 11 ಮಂದಿ ಅರೆಸ್ಟ್

Kannadaprabha News   | Kannada Prabha
Published : Apr 08, 2026, 06:17 AM IST
11 people arrested for selling IPL black tickets at chinnaswamy stadium bengaluru

ಸಾರಾಂಶ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಮತ್ತು ಸಿಎಸ್‌ಕೆ ಪಂದ್ಯದ ಐಪಿಎಲ್ ಟಿಕೆಟ್‌ಗಳನ್ನು ಕಾಳ ಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ 11 ಮಂದಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆನ್‌ಲೈನ್ ಟಿಕೆಟ್ ವರ್ಗಾವಣೆ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಕೃತ್ಯ.

 ಬೆಂಗಳೂರು (ಏ.8) ಮೊಬೈಲ್ ಕಳ್ಳತನ ಕೃತ್ಯಗಳು ನಡೆದ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಳ ಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕಿಳಿದಿದ್ದ 11 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಧ್ಯಪ್ರದೇಶದ ಸುಪ್ರಿಯಾ ಫಡ್ಕೆ, ಇವರ ಸ್ನೇಹಿತ ನಿತಿನ್‌, ಮೋಹನ್‌ ಗೌಡ, ಯಾದಗಿರಿಯ ಮಂಜುನಾಥ, ಪೀಣ್ಯದ ಪುನೀತ್‌, ಲಿಖಿತ್‌, ನೆಲಮಂಗಲದ ಹರ್ಷಾ ರವಿ, ವಿನಯ್‌ಗೌಡ, ಜಗದೀಶ್‌, ಸತ್ಯನಾರಾಯಣ, ದಿನೇಶ್‌ರಾವ್‌ ಬಂಧಿತರು.

ಕಳೆದ ಭಾನುವಾರ ನಡೆದ ಬೆಂಗಳೂರು ರಾಯಲ್ ಚಾಲೆಂಜರ್ಸ್ (ಆರ್‌ಸಿಬಿ) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಗಳ ಪಂದ್ಯದ ವೇಳೆ ಅಕ್ರಮವಾಗಿ ದುಬಾರಿ ಬಲೆಗೆ ಟಿಕೆಟ್ ಮಾರಾಟಕ್ಕೆ ಆರೋಪಿಗಳು ಯತ್ನಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರಿಂದ 28 ಟಿಕೆಟ್‌ಗಳು ಹಾಗೂ 8 ಮೊಬೈಲ್ ಸೇರಿದಂತೆ ₹4.53 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಪಂದ್ಯದ ವೇಳೆ 75 ಮೊಬೈಲ್‌ಗಳನ್ನು ಕಳವು ಮಾಡಿದ್ದ ಜಾರ್ಖಂಡ್ ತಂಡವನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದರು. ಈಗ ಕಾಳ ಸಂತೆಯಲ್ಲಿ ಟಿಕೆಟ್ ಮಾರಾಟಗಾರರು ಸಿಸಿಬಿ ಬಲೆಗೆ ಬಿದ್ದಿದ್ದಾರೆ.

ಟಿಕೆಟ್ ಮಾರಾಟ ಹೇಗೆ:

ಆನ್‌ಲೈನ್‌ನಲ್ಲಿ 4 ಟಿಕೆಟ್‌ಗಳನ್ನು ಒಬ್ಬರು ಖರೀದಿಸಬಹುದು. ಹೀಗೆ ಕೊಂಡ ಟಿಕೆಟ್‌ಗಳನ್ನು ಬೇರೆಯವರಿಗೆ ವರ್ಗಾಯಿಸಲು ಒಂದು ಬಾರಿಗೆ ಅವಕಾಶವಿದೆ. ಲಿಂಕ್ ಶೇರ್ ಮಾಡಿ ಓಟಿಪಿ ಹಾಕಿದರೆ ಬೇರೆಯವರ ಹೆಸರಿನಲ್ಲಿ ಖರೀದಿಸಿದ್ದ ಟಿಕೆಟ್ ಅನ್ನು ಪಡೆಯಬಹುದು. ಈ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಆರೋಪಿಗಳು ಹಣ ಸಂಪಾದನೆಗೆ ಯತ್ನಿಸಿದ್ದರು.

ತಮ್ಮ ಹೆಸರಿನಲ್ಲಿ 4 ಟಿಕೆಟ್‌ಗಳನ್ನು ಖರೀದಿಸಿದ್ದರು. ಪಂದ್ಯ ವೀಕ್ಷಣೆಗೆ ಕ್ರೀಡಾಂಗಣ ಬಳಿ ಬಂದು ಟಿಕೆಟ್ ಸಿಗದೆ ನಿಂತಿದ್ದವರ ಬಳಿ ತೆರಳಿ ಆರೋಪಿಗಳು ಟಿಕೆಟ್ ಮಾರಾಟ ಮಾಡುತ್ತಿದ್ದರು. ತಲಾ ಟಿಕೆಟ್ ₹10 ರಿಂದ 20 ಸಾವಿರಕ್ಕೆ ಮಾರುತ್ತಿದ್ದರು. ಈ ಆರೋಪಿಗಳ ಪೈಕಿ ಬಹುತೇಕರು ಖಾಸಗಿ ಕಂಪನಿಗಳಲ್ಲಿ ಸಣ್ಣಪುಟ್ಟ ಕೆಲಸ ಮಾಡುತ್ತಿದ್ದು, ಸುಲಭವಾಗಿ ಹಣ ಸಂಪಾದನೆಗೆ ಈ ದಂಧೆಗಿಳಿದು ಈಗ ಜೈಲು ಸೇರುವಂತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಏ.15 ಕ್ಕೆ ಪ್ರಧಾನಿ ಮೋದಿ ಆದಿಚುಂಚನಗಿರಿ ಮಠಕ್ಕೆ ಭೇಟಿ; ಈ ದಿನ ಭಕ್ತರಿಗೆ ನಿರ್ಬಂಧ
Karnataka News Live: 1 ಐಪಿಎಲ್ ಟಿಕೆಟ್ ₹20,000! ಬ್ಲ್ಯಾಕ್‌ ಟಿಕೆಟ್ ಮಾರುತ್ತಿದ್ದ 11 ಮಂದಿ ಅರೆಸ್ಟ್