
ದೇವನಹಳ್ಳಿ(ಜೂ.03): ಕೊರೋನಾ ಸೋಂಕಿಗೆ ತುತ್ತಾದ ಯುವಕರು ಸಾವಿಗೀಡಾದ ಮನಕಲಕುವ ಪ್ರಕರಣಗಳು ಸಾಕಷ್ಟುವರದಿಯಾದ ಬೆನ್ನಲ್ಲೇ, 110 ವರ್ಷದ ವೃದ್ಧೆಯೊಬ್ಬರು ಸೋಂಕಿನಿಂದ ಸಂಪೂರ್ಣ ಗುಣಮುಖರಾಗುವ ಮೂಲಕ ಇತರರಿಗೆ ಆಶಾಭಾವನೆ ಮೂಡಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಬುಳ್ಳಹಳ್ಳಿ ಗ್ರಾಮದ ಅಕ್ಕಯ್ಯಮ್ಮ ಅವರು ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಂಡು, ಸರ್ಕಾರಿ ಆಸ್ಪತ್ರೆಯಿಂದ ಬುಧವಾರ ಬಿಡುಗಡೆಯಾಗಿದ್ದಾರೆ. ತನ್ಮೂಲಕ ಸೋಂಕಿನಿಂದ ಗುಣಮುಖರಾದ ರಾಜ್ಯದ ಮತ್ತೊಬ್ಬ ಅತ್ಯಂತ ಹಿರಿಯ ವ್ಯಕ್ತಿ ಎನಿಸಿಕೊಂಡಿದ್ದಾರೆ.
ಚೀನಾ ಲ್ಯಾಬ್ನಲ್ಲೇ ಕೊರೋನಾ ಹುಟ್ಟು, ಅಮೆರಿಕಾದ ಫಂಡಿಂಗ್: ಮೋಸ ಮಾಡಿದ್ದ ಡ್ರ್ಯಾಗನ್!
‘ವೈದ್ಯರ ನಡೆ ಹಳ್ಳಿ ಕಡೆಗೆ’ ಯೋಜನೆಯಡಿ ಬುಳ್ಳಹಳ್ಳಿ ಗ್ರಾಮಕ್ಕೆ ವೈದ್ಯರು ಭೇಟಿ ನೀಡಿ ತಪಾಸಣೆ ನಡೆಸಿದಾಗ ಅಕ್ಕಯ್ಯಮ್ಮ ಅವರಿಗೆ ಕೊರೋನಾ ಪಾಸಿಟಿವ್ ಇರುವುದು ಪತ್ತೆಯಾಗಿತ್ತು. ಕೂಡಲೇ ಅವರನ್ನು ಅದೇ ಗ್ರಾಮದ ರಾಜಪ್ಪ ಎಂಬುವರು ಸ್ಥಳೀಯ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿದ್ದರು. 12 ದಿನಗಳ ಕಾಲ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅಕ್ಕಯ್ಯಮ್ಮ ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಪ್ರಾರಂಭದಲ್ಲಿ ಆಮ್ಲಜನಕ ಪ್ರಮಾಣ 89 ಇದ್ದದ್ದು, ಈಗ 98 ಇದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್ ಮಾಧ್ಯಮದವರಿಗೆ ತಿಳಿಸಿದರು.
ಜಪಾನ್ನಲ್ಲಿ 12-15 ವರ್ಷದ ಮಕ್ಕಳಿಗೆ ಫೈಝರ್ ಲಸಿಕೆ!
ಕಳೆದ ವರ್ಷ ಆಗಸ್ಟ್ನಲ್ಲಿ ಚಿತ್ರದುರ್ಗದ ಸಿದ್ದಮ್ಮ (110) ಅವರು ಕೊರೋನಾದಿಂದ ಚೇತರಿಸಿಕೊಳ್ಳುವ ಮೂಲಕ ಸೋಂಕು ಗೆದ್ದ ರಾಜ್ಯದ ಅತ್ಯಂತ ಹಿರಿಯ ವ್ಯಕ್ತಿ ಎನಿಸಿಕೊಂಡಿದ್ದರು. ಮೇ 24ರಂದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟತಾಲೂಕಿನ ಯನ್ನೂರು ಗ್ರಾಮದ ಕಾಳಮ್ಮ (107) ಕೊರೋನಾದಿಂದ ಗುಣಮುಖರಾಗಿದ್ದರು. ರಾಜ್ಯದ 2ನೇ ಹಿರಿಯ ವ್ಯಕ್ತಿ ಎನಿಸಿಕೊಂಡಿದ್ದರು.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ