ಕರ್ನಾಟಕದಲ್ಲಿ ಇಳಿಮುಖವಾದ ಕೊರೋನಾ: ಜನರಲ್ಲಿ ಹೊಸ ಆಶಾಭಾವನೆ

Published : Dec 20, 2020, 09:16 PM IST
ಕರ್ನಾಟಕದಲ್ಲಿ ಇಳಿಮುಖವಾದ ಕೊರೋನಾ: ಜನರಲ್ಲಿ ಹೊಸ ಆಶಾಭಾವನೆ

ಸಾರಾಂಶ

ರಾಜ್ಯದಲ್ಲಿ ಮಿತಿಮೀರಿದ್ದ ಕೊರೊನಾ ಹಾವಳಿ ನಿಧಾನವಾಗಿ ತಗ್ಗತ್ತಿದೆ. ಕಳೆದ ಕೆಲ ವಾರಗಳಿಂದ ರಾಜ್ಯದಲ್ಲಿ ಸಾವಿರದ ಆಸುಪಾಸಿನಲ್ಲಿ ಹೊಸ ಪ್ರಕರಣ ಪತ್ತೆ ಆಗುತ್ತಿದೆ. 

ಬೆಂಗಳೂರು, (ಡಿ.20): ನಿತ್ಯ ರಾಜ್ಯದಲ್ಲಿ ಹೊಸ​ ಕೇಸ್​ಗಳ ಸಂಖ್ಯೆ ಕೂಡ ಕಡಿಮೆ ಆಗುತ್ತಿರುವುದು ಜನರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.

ಕರ್ನಾಟಕದಲ್ಲಿ ಇಂದು (ಭಾನುವಾರ) ಹೊಸದಾಗಿ 1194 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 9,09,469ಕ್ಕೇರಿದೆ.

ಇನ್ನು ಸೋಕಿನಿಂದ 5 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿರುವುದು ನಿಟ್ಟುಸಿರು ಬಿಡುವಂತೆ ಮಾಡಿದ್ದು, ರಾಜ್ಯದಲ್ಲಿ ಇದುವರೆಗೆ ಕೊರೋನಾದಿಂದ 12,009 ಜನರ ಸಾವನಪ್ಪಿದ್ದಾರೆ. 

ವ್ಯಾಕ್ಸಿನ್ ಕೊಟ್ಟ ಜಾಗದಲ್ಲಿ ರಿಯಾಕ್ಷನ್, ಶುರುವಾಗಿದೆ ಟೆನ್ಷನ್; ಲಸಿಕೆ ಕೂಡಾ ಸೇಫಲ್ಲ?

ಸೋಂಕಿತರ ಪೈಕಿ 8,82,944 ಜನ ಗುಣಮುಖರಾಗಿ ಡಿಸ್​ಚಾರ್ಜ್ ಆಗಿದ್ದಾರೆ. 14,497 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರಲ್ಲಿ 219 ಜನರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿಂದು 659 ಹೊಸ ಕೊರೋನಾ ಕೇಸ್ ಪತ್ತೆ ಆಗಿದೆ. 5 ಜನರ ಪೈಕಿ ಇಬ್ಬರು ಬೆಂಗಳೂರಿನಲ್ಲೇ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!