
ಮೈಸೂರು[ಡಿ.01]: ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ ಭಾರಿ ಗಾತ್ರದ ಮಾಂಸದ ಗೆಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯುವಲ್ಲಿ ನಗರದ ಶ್ರೀದೇವಿ ನರ್ಸಿಂಗ್ ಹೋಮ್ ವೈದ್ಯರು ಯಶಸ್ವಿಯಾಗಿದ್ದಾರೆ. ಶಾಂತಿನಗರ ನಿವಾಸಿ ಸಲ್ಮಾ (47) ಅವರ ಹೊಟ್ಟೆಯಲ್ಲಿ ಬೆಳೆದಿದ್ದ 12 ಕೆ.ಜಿ. ತೂಕದ ದುರ್ಮಾಂಸವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿದೆ.
ಮನೆಗೆಲಸ ಮಾಡುವ ಸಲ್ಮಾ ಅವರಿಗೆ ಆಗಾಗ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿತ್ತು. ಅಲ್ಲದೆ ಇತ್ತೀಚೆಗೆ ಹೊಟ್ಟೆದಪ್ಪದಾಗಿತ್ತು. ಆಸ್ಪತ್ರೆಯೊಂದರಲ್ಲಿ ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ಗೆಡ್ಡೆ ಇರುವುದು ಖಚಿತವಾಗಿತ್ತು. ಶಸ್ತ್ರಚಿಕಿತ್ಸೆಗೆ ಹೆಚ್ಚಿನ ಹಣ ಖರ್ಚಾಗುವುದಾಗಿ ವೈದ್ಯರು ತಿಳಿಸಿದ್ದರು. ಹೆಚ್ಚಿನ ಹಣ ಹೊಂದಿಸಲು ಸಾಧ್ಯವಾಗದೆ ಸಲ್ಮಾ, ತಮ್ಮ ಸಂಬಂಧಿಕರ ಸಲಹೆಯಂತೆ ಎರಡು ದಿನಗಳ ಹಿಂದೆ ಶ್ರೀದೇವಿ ನರ್ಸಿಂಗ್ ಹೋಮ್ಗೆ ಬಂದು ದಾಖಲಾದರು. ವೈದ್ಯ ಡಾ. ಬಿ.ಡಿ. ದೇವರಾಜ್ ರೋಗಿಯ ಪರೀಕ್ಷೆ ನಡೆಸಿ ಶುಕ್ರವಾರ ಬೆಳಗ್ಗೆ ಶಸ್ತ್ರಚಿಕಿತ್ಸೆ ಮೂಲಕ ಗೆಡ್ಡೆ (ದುರ್ಮಾಂಸ)ಯನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು. ಸಲ್ಮಾ ಇದೀಗ ಆರೋಗ್ಯದಿಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ