
ಬೆಂಗಳೂರು, (ಮೇ.2): ರಾಜ್ಯದಲ್ಲಿ ನಿನ್ನೆ (ಶುಕ್ರವಾರ) ಸಂಜೆಯಿಂದ ಕೊರೋನಾ ಸೋಂಕಿನಿಂದ ಒಟ್ಟು ಮೂವರು ಸಾವು ಹಾಗೂ ಒಟ್ಟು 12 ಮಂದಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ.
ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 601ಕ್ಕೇರಿದೆ ಹಾಗೂ ಮೃತರ ಸಂಖ್ಯೆ 25ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ನಲ್ಲಿ ತಿಳಿಸಿದೆ.
ರಾಜ್ಯ ಸರ್ಕಾರದಿಂದ ಹೊಸ ಗೈಡ್ಲೈನ್ಸ್ ರಿಲೀಸ್: ಯಾವ ಝೋನ್ನಲ್ಲಿ ಏನಿರುತ್ತೆ? ಏನಿರಲ್ಲ?
ಇಂದು (ಶನಿವಾರ) ಸಂಜೆ ಬಿಡುಗಡೆಗೊಳಿಸಿರುವ ಆರೋಗ್ಯ ಬುಲೆಟ್ನಲ್ಲಿ ಶುಕ್ರವಾರ ಸಂಜೆ 5ರಿಂದ ಇಂದು ಸಂಜೆ 5 ಗಂಟೆಯೊಳಗೆ ಮೂರು ಸಾವು, ಹೊಸ 12 ಪಾಸಿಟಿವ್ ಪ್ರಕರಣಗಳು ವರದಿಯಾಗಿರುವುದಾಗಿ ತಿಳಿಸಿದೆ.
ದಾವಣಗೆರೆಯ 69 ವರ್ಷದ ವ್ಯಕ್ತಿ, ಬೀದರ್ ಜಿಲ್ಲೆಯ 82 ವರ್ಷದ ವೃದ್ಧ ಹಾಗೂ ಬೆಂಗಳೂರಿನ 63 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಜೊತೆಗೆ, ಬೆಂಗಳೂರು ನಗರದಲ್ಲಿ 4, ತುಮಕೂರಿನಲ್ಲಿ 2, ವಿಜಯಪುರದಲ್ಲಿ 2, ಬೀದರ್, ಚಿಕ್ಕಬಳ್ಳಾಪುರ, ಬೆಳಗಾವಿ, ಬಾಗಲಕೋಟೆಯಲ್ಲಿ ತಲಾ ಒಂದು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.
ಒಟ್ಟಾರೆ ಇದುವರೆಗೆ ರಾಜ್ಯದಲ್ಲಿ ಪಾಸಿಟಿವ್ ಬಂದ 601 ಪ್ರಕರಣಗಳಲ್ಲಿ 271 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 25 ಮಂದಿ ಮೃತಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ