ಗಣತಿಗೆ ವೀರಶೈವ ಲಿಂಗಾಯತ ಬರೆಸಿ - ಪಂಚ ಪೀಠಾಧೀಶರಿಂದ 12 ನಿರ್ಣಯ

Kannadaprabha News   | Kannada Prabha
Published : Jul 23, 2025, 07:25 AM IST
Veerashaiva Lingayat Shringa Sammelana 2025: Key Decisions on Caste Census and OBC Reservation in Davangere

ಸಾರಾಂಶ

ಮುಂಬರುವ ಜನ-ಜಾತಿಗಣತಿ ವೇಳೆ ವೀರಶೈವ-ಲಿಂಗಾಯತರ ಎಲ್ಲ ಒಳಪಂಗಡಗಳು ‘ವೀರಶೈವ ಲಿಂಗಾಯತ’ ಎಂದು ಬರೆಯಿಸಬೇಕು. ಸಮಾಜದ ಎಲ್ಲ ಒಳಪಂಗಡಗಳಿಗೆ ಒಬಿಸಿ ಸ್ಥಾನಮಾನ ನೀಡಬೇಕು ಎಂಬ ನಿರ್ಣಯ ಸೇರಿ 12 ನಿರ್ಣಯಗಳನ್ನು ಪಂಚ ಪೀಠಾಧೀಶರು ಹಾಗೂ ಶಿವಾಚಾರ್ಯ ಶೃಂಗ ಸಮ್ಮೇಳನದಲ್ಲಿ ಕೈಗೊಳ್ಳಲಾಗಿದೆ.

ದಾವಣಗೆರೆ : ಮುಂಬರುವ ಜನ-ಜಾತಿಗಣತಿ ವೇಳೆ ವೀರಶೈವ-ಲಿಂಗಾಯತರ ಎಲ್ಲ ಒಳಪಂಗಡಗಳು ‘ವೀರಶೈವ ಲಿಂಗಾಯತ’ ಎಂದು ಬರೆಯಿಸಬೇಕು. ಸಮಾಜದ ಎಲ್ಲ ಒಳಪಂಗಡಗಳಿಗೆ ಒಬಿಸಿ ಸ್ಥಾನಮಾನ ನೀಡಬೇಕು ಎಂಬ ನಿರ್ಣಯ ಸೇರಿ 12 ನಿರ್ಣಯಗಳನ್ನು ಪಂಚ ಪೀಠಾಧೀಶರು ಹಾಗೂ ಶಿವಾಚಾರ್ಯ ಶೃಂಗ ಸಮ್ಮೇಳನದಲ್ಲಿ ಕೈಗೊಳ್ಳಲಾಗಿದೆ.

ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಸಮ್ಮೇಳನದ ಕೊನೆಯ ದಿನವಾದ ಮಂಗಳವಾರ ಸಂಜೆ 12 ನಿರ್ಣಯಗಳನ್ನು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಮಂಡಿಸಿದರು.

ಸಮ್ಮೇಳನದಲ್ಲಿ ಕೈಗೊಂಡ 12 ನಿರ್ಣಯಗಳನ್ನು ಒಂದೊಂದಾಗಿ ಓದಿದ ರಂಭಾಪುರಿ ಜಗದ್ಗುರುಗಳು ಅವುಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನವನ್ನು ಸರ್ಕಾರಗಳು, ಸಮಾಜದ ನಾಯಕರು, ಜನಪ್ರತಿನಿಧಿಗಳು, ಸಮಾಜ ಬಾಂಧವರು ಮಾಡಬೇಕು ಎಂದು ತಿಳಿಸಿದರು.

ಪ್ರಮುಖ ನಿರ್ಣಯಗಳು

- ಜಾತಿ ಗಣತಿಯಲ್ಲಿ ಎಲ್ಲ ಒಳಪಂಗಡಗಳು ‘ವೀರಶೈವ ಲಿಂಗಾಯತ’ ಎಂದು ಬರೆಸಿ.

- ನಾವೆಲ್ಲ ವೀರಶೈವ ಲಿಂಗಾಯತರೆಂಬ ಒಗ್ಗಟ್ಟನ್ನು ಕಾಪಾಡಿಕೊಂಡು ಹೋಗಬೇಕು- ಜನಗಣತಿ ಫಾರಂನಲ್ಲಿ ಮತದ ಕಾಲಂ ಸಹ ಇರಬೇಕು ಎಂದು ಕೇಂದ್ರಕ್ಕೆ ಆಗ್ರಹ

- ವೀರಶೈವ ಲಿಂಗಾಯತ ಧರ್ಮದ ಎಲ್ಲ ಒಳಪಂಗಡಗಳಿಗೆ ಒಬಿಸಿ ಸ್ಥಾನಮಾನ ನೀಡಿ

- ಸಮಾಜದ ಎಲ್ಲ ಒಳಪಂಗಡಗಳಿಗೆ ಇರುವ ಮೀಸಲಾತಿ ಸೌಲಭ್ಯ ಮುಂದುವರಿಸಿ

- ಸಮಾಜದ ಸಂಘಟನೆಗಳು ಜಗದ್ಗುರು ರೇಣುಕಾಚಾರ್ಯರ ಫೋಟೋ ಹಾಕುಬೇಕು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!