
ಬೆಂಗಳೂರು (ಮೇ.23): ದೇಶದ ಪೂರ್ವ ಕರಾವಳಿಗೆ ‘ಯಾಸ್’ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ನೈಋುತ್ಯ ರೈಲ್ವೆ ಮೇ 24ರಿಂದ 27ರವರೆಗೆ ಬೆಂಗಳೂರಿನಿಂದ ಆ ಭಾಗಕ್ಕೆ ಸಂಚರಿಸುವ 12 ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಿದೆ.
ಬೆಂಗಳೂರಿನಿಂದ ಪಶ್ಚಿಮ ಬಂಗಾಳ, ಅಸ್ಸಾಂ, ಒಡಿಶಾ, ಬಿಹಾರ ರಾಜ್ಯಗಳು ಹಾಗೂ ಈ ರಾಜ್ಯಗಳಿಂದ ಬೆಂಗಳೂರಿಗೆ ಬರುವ ರೈಲುಗಳ ಸಂಚಾರ ಸಂಚಾರವನ್ನು ಸ್ಥಗಿತಗೊಳಿಸಿದೆ.
ಭೀಕರವಾಗಿ ಅಪ್ಪಳಿಸೋ ಸೈಕ್ಲೋನ್ ಯಾಸ್ ಹೆಸರಿನ ಅರ್ಥ ಮಾತ್ರ ಸುಂದರ..! ..
ಹೌರಾ-ಯಶವಂತಪುರ ಎಕ್ಸ್ಪ್ರೆಸ್, ಯಶವಂತಪುರ-ಹೌರಾ ಎಕ್ಸ್ಪ್ರೆಸ್, ಗುವಾಹಟಿ-ಬೆಂಗಳೂರು ಕಂಟೋನ್ಮೆಂಟ್ ಸ್ಪೆಷಲ್ ಎಕ್ಸ್ಪ್ರೆಸ್, ಹೌರಾ-ಯಶವಂತಪುರ ಸ್ಪೆಷಲ್ ಎಕ್ಸ್ಪ್ರೆಸ್, ಯಶವಂತಪುರ- ಹೌರಾ ಸ್ಪೆಷಲ್ ಎಕ್ಸ್ಪ್ರೆಸ್, ಮುಜಾಫರ್ ಪುರ-ಯಶವಂತಪುರ ಸ್ಪೆಷಲ್ ಎಕ್ಸ್ಪ್ರೆಸ್, ಭುವನೇಶ್ವರ-ಕೆಎಸ್ಆರ್ ಸ್ಪೆಷಲ್ ಎಕ್ಸ್ಪ್ರೆಸ್ ರೈಲು, ಕೆಎಸ್ಆರ್ ಬೆಂಗಳೂರು- ಭುವನೇಶ್ವರ ಸ್ಪೆಷಲ್ ಎಕ್ಸ್ಪ್ರೆಸ್, ಕೆಎಸ್ಆರ್ ಬೆಂಗಳೂರು- ನ್ಯೂ ತಿನ್ಸುಖಿಯಾ ಸ್ಪೆಷಲ್ ಎಕ್ಸ್ಪ್ರೆಸ್, ಭಾಗಲ್ಪುರ್-ಯಶವಂತಪುರ ಸ್ಪೆಷಲ್ ಎಕ್ಸ್ಪ್ರೆಸ್, ಕಾಮಾಕ್ಯ-ಯಶವಂತಪುರ ಸ್ಪೆಷಲ್ ಎಕ್ಸ್ಪ್ರೆಸ್ ಹಾಗೂ ಯಶವಂತಪುರ-ಹೌರಾ ಸ್ಪೆಷಲ್ ಎಕ್ಸ್ಪ್ರೆಸ್ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ನೈಋುತ್ಯ ರೈಲ್ವೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ