ಕೊರೋನಾ 2ನೇ ಅಲೆ: 120 ಸಾರಿಗೆ ನೌಕರರು ಸೋಂಕಿಗೆ ಬಲಿ

Kannadaprabha News   | Asianet News
Published : May 28, 2021, 07:38 AM ISTUpdated : May 28, 2021, 08:58 AM IST
ಕೊರೋನಾ 2ನೇ ಅಲೆ: 120 ಸಾರಿಗೆ ನೌಕರರು ಸೋಂಕಿಗೆ ಬಲಿ

ಸಾರಾಂಶ

* ನಾಲ್ಕೂ ಸಾರಿಗೆ ವಿಭಾಗದ ನೌಕರರು ಬಾಧಿತ * ಮೊದಲ ಅಲೆ ವೇಳೆ 110ಕ್ಕೂ ಹೆಚ್ಚು ಮಂದಿ ಸಾವು * ಸೆಮಿಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಬಸ್‌ ಸಂಚಾರ ಸ್ಥಗಿತ  

ಬೆಂಗಳೂರು(ಮೇ.28): ಕೊರೋನಾ ಎರಡನೇ ಅಲೆಯಲ್ಲಿ ಈವರೆಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಚಾಲಕರು, ನಿರ್ವಾಹಕರು, ಮೆಕ್ಯಾನಿಕ್‌ಗಳು ಸೇರಿದಂತೆ 120ಕ್ಕೂ ಅಧಿಕ ನೌಕರರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಸೆಮಿಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಬಹುತೇಕ ನೌಕರರು ಊರುಗಳಿಗೆ ತೆರಳಿರುವುದರಿಂದ ಮೃತ ನೌಕರರ ಬಗ್ಗೆ ಸಾರಿಗೆ ನಿಗಮಗಳಿಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ. ಸದ್ಯಕ್ಕೆ ದೊರೆತಿರುವ ಪ್ರಾಥಮಿಕ ಮಾಹಿತಿ ಪ್ರಕಾರ ನಾಲ್ಕು ಸಾರಿಗೆ ನಿಗಮಗಳ 120 ನೌಕರರು ಸೋಂಕಿಗೆ ಬಲಿಯಾಗಿದ್ದಾರೆ. ಆದರೆ, ಸೋಂಕಿಗೆ ಮೃತರಾದ ನೌಕರರ ಸಂಖ್ಯೆ 150 ದಾಟಲಿದೆ ಎಂದು ಸಾರಿಗೆ ನೌಕರರ ಮುಂಡರು ಹೇಳುತ್ತಿದ್ದಾರೆ.

"

ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಇಕೆಆರ್‌ಟಿಸಿ, ಎನ್‌ಡಬ್ಲೂಕೆಆರ್‌ಟಿಸಿ ನಿಗಮಗಳಲ್ಲಿ ಒಟ್ಟು ಸುಮಾರು 1.30 ಲಕ್ಷ ನೌಕರರು ಇದ್ದಾರೆ. ಸೆಮಿಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಬಸ್‌ ಸಂಚಾರ ಸ್ಥಗಿತವಾಗಿದೆ. ಅಗತ್ಯಸೇವೆಗೆ ನಿಯೋಜಿಸಿರುವ ಬಸ್‌ಗಳಲ್ಲಿ ಸುಮಾರು ಮೂರು ಸಾವಿರ ನೌಕರರು ಮಾತ್ರ ಸದ್ಯಕ್ಕೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಉಳಿದಂತೆ 1.20 ಲಕ್ಷಕ್ಕೂ ಅಧಿಕ ನೌಕರರು ಊರುಗಳಿಗೆ ತೆರಳಿದ್ದಾರೆ. ಕೆಲ ನೌಕರರು ಊರುಗಳಲ್ಲಿ ಇದ್ದಾಗಲೇ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಸೆಮಿಲಾಕ್‌ ಡೌನ್‌ ಮುಗಿದು ಬಸ್‌ ಸಂಚಾರ ಪುನರಾರಂಭವಾದರೆ, ಮೃತ ನೌಕರರ ಸಂಖ್ಯೆ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಲಿದೆ ಎಂದು ಕೆಎಸ್‌ಆರ್‌ಟಿಸಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಸಾರಿಗೆ ನೌಕರರಿಗೆ ಮಿಡಿದ ಸರ್ಕಾರ, ವೇತನ ಪಾವತಿಗೆ ಹಣ

ಮೊದಲ ಅಲೆಯಲ್ಲಿ 110ಕ್ಕೂ ಹೆಚ್ಚು ನೌಕರರು ಸಾವು

ಕೊರೋನಾ ಮೊದಲ ಅಲೆಯಲ್ಲಿ ನಾಲ್ಕು ರಸ್ತೆ ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ 110ಕ್ಕೂ ಹೆಚ್ಚು ನೌಕರರು ಕೊರೋನಾ ಸೋಂಕಿಗೆ ಬಲಿಯಾಗಿದ್ದರು. ಸಾರಿಗೆ ನೌಕರರು ಕೊರೋನಾ ವಾರಿಯರ್‌ ಗುಂಪಿಗೆ ಸೇರಿರುವುದರಿಂದ ಮೃತ ನೌಕರರ ಕುಟುಂಬಕ್ಕೆ 30 ಲಕ್ಷ ರು. ಪರಿಹಾರ ಘೋಷಿಸಲಾಗಿತ್ತು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಾಂಕೇತಿಕವಾಗಿ ಏಳು ಕುಟುಂಬಕ್ಕೆ ಪರಿಹಾರದ ಚೆಕ್‌ ವಿತರಿಸಿದ್ದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!