
ಬೆಂಗಳೂರು, (ಆ.25): ರಾಜ್ಯದಲ್ಲಿ ಇಂದು (ಆ.25) ಹೊಸದಾಗಿ 1224 ಜನರಿಗೆ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 22 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನು 1668 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,42,250 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,85,700 ಜನ ಗುಣಮುಖರಾಗಿದ್ದಾರೆ. 37,206 ಜನ ಮೃತಪಟ್ಟಿದ್ದು, ಸದ್ಯ 19,318 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.62 ರಷ್ಟು ಇದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಗಣೇಶಹಬ್ಬ ಅಷ್ಟೇ ಅಲ್ಲ, ಯಾವುದೇ ಹಬ್ಬ ಮಾಡಿದ್ರೂ ಸಮಸ್ಯೆ: ಸರ್ಕಾರಕ್ಕೆ ದೇವಿ ಶೆಟ್ಟಿ ಎಚ್ಚರಿಕೆ
ಇನ್ನು ರಾಜಧಾನಿ ಬೆಂಗಳೂರಿನಲ್ಲಿ 309 ಜನರಿಗೆ ಸೋಂಕು ತಗುಲಿದ್ದು, 657 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3 ಜನ ಮೃತಪಟ್ಟಿದ್ದಾರೆ. 7231 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಮಾಹಿತಿ
ಬೆಂಗಳೂರು ನಗರ 309, ದಕ್ಷಿಣಕನ್ನಡ 217, ಹಾಸನ 95, ಕೊಡಗು 41, ಮಂಡ್ಯ 38, ಮೈಸೂರು 102, ಶಿವಮೊಗ್ಗ 42, ತುಮಕೂರು 52, ಉಡುಪಿ 130, ಉತ್ತರಕನ್ನಡ 48, ಬಾಗಲಕೋಟೆ 2, ಬಳ್ಳಾರಿ 3, ಬೀದರ್ 0, ಚಾಮರಾಜನಗರ 6, ಚಿಕ್ಕಬಳ್ಳಾಪುರ 2, ಗದಗ 0, ಹಾವೇರಿ 3, ಕೊಪ್ಪಳ 2, ರಾಯಚೂರು 1, ರಾಮನಗರ 1, ವಿಜಯಪುರ 3, ಯಾದಗಿರಿ 8 ಕೇಸ್ ಪತ್ತೆಯಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ