ಕರ್ನಾಟಕದಲ್ಲಿ ಕೊಂಚ ಕೊರೋನಾ ಇಳಿಕೆ: ಇಲ್ಲಿದೆ ಆ.28ರ ಅಂಕಿ-ಸಂಖ್ಯೆ

Published : Aug 28, 2021, 07:52 PM IST
ಕರ್ನಾಟಕದಲ್ಲಿ ಕೊಂಚ ಕೊರೋನಾ ಇಳಿಕೆ: ಇಲ್ಲಿದೆ ಆ.28ರ ಅಂಕಿ-ಸಂಖ್ಯೆ

ಸಾರಾಂಶ

* ಕರ್ನಾಟಕದ ಕೊರೋನಾ ಅಂಕಿ-ಸಂಖ್ಯೆ * ರಾಜ್ಯದಲ್ಲಿ ಕೊಂಚ ಇಳಿಕೆ ಕಂಡ ಕೊರೋನಾ ಸೋಂಕು * ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೂನ್ಯ ಸಾವಿನ ಪ್ರಕರಣ

ಬೆಂಗಳೂರು, (ಆ.28): ಕರ್ನಾಟಕ ರಾಜ್ಯದಲ್ಲಿ ಇಂದು (ಆ.28) ಹೊಸದಾಗಿ 1,229 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 13 ಜನರ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 29,45,993 ಕ್ಕೆ ಏರಿಕೆಯಾಗಿದ್ರೆ,  ಈವರೆಗೆ ಕೊರೋನಾದಿಂದ 37,261 ಜನ ಸಾವನ್ನಪ್ಪಿದ್ದಾರೆ. ಇನ್ನು ಸೋಂಕಿತರ ಪೈಕಿ 28,89,809 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಶ್ವಾಸಕೋಶದ ಕ್ಯಾನ್ಸರ್‌ ಇದ್ದವರಲ್ಲಿ ಕೋವಿಡ್‌ ಸೋಂಕಿನ ಅಪಾಯ ಹೆಚ್ಚು

ಸದ್ಯ ರಾಜ್ಯದಲ್ಲಿ 18,897 ಕೊರೋನಾ ಸಕ್ರಿಯ ಪ್ರಕರಣಗಳಿವೆ. ಸೋಂಕಿನ ಪಾಸಿಟಿವಿಟಿ ದರ 0.66%  ಇದ್ರೆ, ಡೆತ್ ರೇಟ್ 1.05 % ಇದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 310 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೋನಾ ಪೀಡಿತರ ಸಂಖ್ಯೆ 12,36,925 ಕ್ಕೆ ಏರಿಕೆಯಾಗಿದೆ. 12,36,925 ಸೋಂಕಿತರ ಪೈಕಿ 12,13,625 ಜನರು ಗುಣಮುಖರಾಗಿದ್ದಾರೆ. 

ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,977 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,322 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಕೊರೋನಾ ಕೇಸ್ 
ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 29, ಬೆಂಗಳೂರು ಗ್ರಾಮಾಂತರ 15, ಬೆಂಗಳೂರು ನಗರ 310, ಬೀದರ್ 0, ಚಾಮರಾಜನಗರ 7, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 35, ಚಿತ್ರದುರ್ಗ 15, ದಕ್ಷಿಣ ಕನ್ನಡ 207, ದಾವಣಗೆರೆ 12, ಧಾರವಾಡ 7, ಗದಗ 2, ಹಾಸನ 103, ಹಾವೇರಿ 3, ಕಲಬುರಗಿ 2, ಕೊಡಗು 75, ಕೋಲಾರ 15, ಕೊಪ್ಪಳ 2, ಮಂಡ್ಯ 21, ಮೈಸೂರು 82, ರಾಯಚೂರು 0, ರಾಮನಗರ 3, ಶಿವಮೊಗ್ಗ 42, ತುಮಕೂರು 44, ಉಡುಪಿ 146, ಉತ್ತರ ಕನ್ನಡ 42, ವಿಜಯಪುರ 1, ಯಾದಗಿರಿ  0.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ