
ಬೆಂಗಳೂರು, (ಜೂನ್.05): ಕರ್ನಾಟಕದಲ್ಲಿ ಇಂದು (ಶನಿವಾರ) ಮತ್ತಷ್ಟು ಕೊರೋನಾ ಇಳಿಮುಖವಾಗಿದ್ದು, ರಾಜ್ಯದಲ್ಲಿ ಶೇ.9.69ಕ್ಕೆ ಕೊರೋನಾ ಪಾಸಿಟಿವಿಟಿ ದರ ಇಳಿಕೆಯಾಗಿದೆ
ರಾಜ್ಯದಲ್ಲಿ ಶನಿವಾರ 1,42, 291 ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದ್ದು, ಇದರಲ್ಲಿ 13,800 ಜನರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 365 ಮಂದಿ ಸಾವನ್ನಪ್ಪಿದ್ದು, ಬರೋಬ್ಬರಿ 25,346 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಪಾಸಿಟಿವಿಟಿ, ಮರಣ ಪ್ರಮಾಣ ಇಳಿಸಿ: ಸಿಎಂ ಯಡಿಯೂರಪ್ಪ
ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 26,83,314ಕ್ಕೆ ಏರಿಕೆಯಾಗಿದ್ರೆ, ಇದುವರೆಗೆ ಮೃತಪಟ್ಟವರ ಸಂಖ್ಯೆ 31.260ಕ್ಕೇರಿದೆ. ಈವರೆಗೆ 23,83,758 ಜನ ಗುಣಮುಖರಾಗಿದ್ದಾರೆ. ಇದರೊಂದಿಗೆ ಪ್ರಸ್ತುತ 2,68,275 ಸಕ್ರಿಯ ಪ್ರಕರಣಗಳು ಇವೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕೊರೋನಾ ಇಳಿಮುಖವಾಗಿದ್ದು, ಇಂದು 2686 ಜನರಿಗೆ ಸೋಂಕು ತಗುಲಿದೆ. 206 ಮಂದಿ ಸಾವನ್ನಪ್ಪಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ