ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 1,492 ಕೋಟಿ ರು. ಅನುದಾನ

Kannadaprabha News   | Asianet News
Published : Jun 26, 2021, 08:12 AM IST
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 1,492 ಕೋಟಿ ರು. ಅನುದಾನ

ಸಾರಾಂಶ

* 1492.97 ಕೋಟಿ ರು. ಅನುದಾನಕ್ಕೆ ರಾಜ್ಯಪಾಲರ ಅನುಮೋದನೆ * ನಂಜುಂಡಪ್ಪ ವರದಿ ಆಧರಿಸಿ ಅನುದಾನ ಹಂಚಿಕೆ  * ಕ್ರಿಯಾಯೋಜನೆ ರೂಪಿಸಲು ರಾಜ್ಯಪಾಲರಿಂದ ಹಸಿರು ನಿಶಾನೆ

ಬೆಂಗಳೂರು(ಜೂ.26):  ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಸಕ್ತ ಸಾಲಿನ ಕ್ರಿಯಾಯೋಜನೆ ರೂಪಿಸಲು 1492.97 ಕೋಟಿ ರು. ಅನುದಾನಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.
ಟಿಎಸ್‌ಪಿ ಯೋಜನೆಗೆ 100 ಕೋಟಿ ರು., ಎಸ್‌ಸಿಪಿ ಯೋಜನೆಗೆ 300 ಕೋಟಿ ರು. ಹಾಗೂ ಸಾಮಾನ್ಯ 1092.97 ಕೋಟಿ ರು. ಅನುದಾನ ಹಂಚಿಕೆ ಮಾಡಲಾಗಿದ್ದು, ಅದರಂತೆ ಕ್ರಿಯಾಯೋಜನೆ ರೂಪಿಸಲು ರಾಜ್ಯಪಾಲರಿಂದ ಹಸಿರು ನಿಶಾನೆ ದೊರೆತಿದೆ.

2021-22 ನೇ ಸಾಲಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಒದಗಿಸಲಾಗಿರುವ 1492.97 ಕೋಟಿ ರು. ಅನುದಾನಕ್ಕೆ ಮಂಡಳಿ ವ್ಯಾಪ್ತಿಯ ಜಿಲ್ಲೆ ಹಾಗೂ ತಾಲ್ಲೂಕುಗಳಿಗೆ ನಂಜುಂಡಪ್ಪ ವರದಿ ಆಧರಿಸಿ ಅನುದಾನ ಹಂಚಿಕೆ ಮಾಡಲಾಗಿದೆ. ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆಗಳಡಿ ಮಂಡಳಿಯ ಒಟ್ಟು ಅನುದಾನದ ಶೇ. 84 ರಷ್ಟು ಅನುದಾನದಲ್ಲಿ ಮೈಕ್ರೋ ಯೋಜನೆಗೆ ಶೇ.70ರಷ್ಟು ಅನುದಾನವನ್ನು ತಾಲ್ಲೂಕುವಾರು ಹಂಚಿಕೆ ಮಾಡಲಾಗುವುದು. ಮ್ಯಾಕ್ರೋ ಯೋಜನೆಗೆ ಶೇ. 30 ರಷ್ಟು ಅನುದಾನವನ್ನು ಬೃಹತ್‌ ಮೊತ್ತದ ಮೂರ್ನಾಲ್ಕು ಯೋಜನೆಗಳಿಗೆ ಮಾತ್ರ ಹಂಚಿಕೆ ಮಾಡಲಾಗುವುದು.

ಕೆರಳಿದ ಕಲ್ಯಾಣ: ಸರ್ಕಾರದ ಬಳಿಗೆ ನಿಯೋಗಕ್ಕೆ ನಿರ್ಧಾರ

ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಲಯಗಳು, ಕೈಗಾರಿಕೆ, ಕೌಶಲ್ಯಾಭಿವೃದ್ಧಿ, ನೀರಾವರಿ, ಕುಡಿಯುವ ನೀರು, ರಸ್ತೆ ಮತ್ತು ಸಂಪರ್ಕ, ಅಂತರ್ಜಲ ಸಂರಕ್ಷಣೆ, ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಕಾಮಗಾರಿ ನಡೆಸಲಾಗುವುದು. ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆಗಳಡಿ ಜಿಲ್ಲಾವಾರು ಸಾಮಾನ್ಯ, ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನಕ್ಕೆ ಕ್ರಿಯಾ ಯೋಜನೆ ಸಲ್ಲಿಸಿ ಸರ್ಕಾರದಿಂದ ಅನುಮೋದನೆ ಪಡೆದುಕೊಳ್ಳಬೇಕು. ಎಸ್‌ಸಿಪಿ ಮತ್ತು ಟಿಎಸ್‌ಪಿಯಡಿ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆಗೆ ಕ್ರಿಯಾಯೋಜನೆಯನ್ನು ಪ್ರತ್ಯೇಕವಾಗಿ ರೂಪಿಸಿ ಅನುಷ್ಠಾನಗೊಳಿಸಬೇಕಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!