
ಬೆಂಗಳೂರು, (ಜುಲೈ.07): ರಾಜ್ಯದಲ್ಲಿ ಕೊರೋನಾ ವೈರಸ್ ರಣಕೇಕೆ ಮೃದಂಗ ಮುಂದುವರೆದಿದ್ದು, ಮಂಗಳವಾರ ಒಂದೇ ದಿನ 1498 ಮಂದಿ ಕೊರೋನಾ ಅಟ್ಯಾಕ್ ಆಗಿದೆ.
ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 26,815ಕ್ಕೆ ಏರಿಕೆಯಾಗಿದೆ. ಅದರಲ್ಲೂ ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 800 ಪ್ರಕರಣಗಳು ಪತ್ತೆಯಾಗಿವೆ.
'ಎಲ್ಲರಿಗೂ ಕೊರೋನಾ ಬರಬಹುದು, ಭಯ ಪಡಬೇಡಿ'
ಇನ್ನು ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 15 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೊರೋನಾಗೆ ಉಸಿರು ಚೆಲ್ಲಿದವರ ಸಂಖ್ಯೆ 416ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಮಂಗಳವಾರ 571 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 11098ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 15297 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಅಂಕಿ-ಅಂಶ
ಬೆಂಗಳೂರು 800, ದಕ್ಷಿಣ ಕನ್ನಡ 83, ಧಾರವಾಡ 57, ಕಲಬುರಗಿ 51, ಬೀದರ್ 51, ಮೈಸೂರು 45, ಬಳ್ಳಾರಿ 45, ರಾಮನಗರ 37, ಉತ್ತರ ಕನ್ನಡ 5, ಶಿವಮೊಗ್ಗ 33, ಮಂಡ್ಯ29, ಉಡುಪಿ ಮತ್ತು ಹಾಸನ ತಲಾ 28, ಬಾಗಲಕೋಟೆ 26, ರಾಯಚೂರು 23, ವಿಜಯಪುರ 22, ಬೆಳಗಾವಿ 23, ತುಮಕೂರು16, ಕೊಡಗು14, ಯಾದಗಿರಿ10, ದಾವಣಗೆರೆ 06, ಕೋಲಾರ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು ಮತ್ತು ಕೊಪ್ಪಳ ತಲಾ 6, ಗದಗ 4, ಚಿಕ್ಕಬಳ್ಳಾಪುರ 3, ಚಿತ್ರದುರ್ಗ 1 ಕೇಸ್ ಪತ್ತೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ