
ಬೆಂಗಳೂರು(ಏ.06): ಒಳಚರಂಡಿ ನೀರು ಹರಿವಿನಿಂದ ಕೊಡಗು ಜಿಲ್ಲೆ ಭಾಗಮಂಡಲದಲ್ಲಿ ‘ಕಾವೇರಿ’ ಹಾಗೂ ‘ಕನ್ನಿಕೆ’ ನದಿಪಾತ್ರದಲ್ಲಿ ಉಂಟಾಗಿರುವ ಮಾಲಿನ್ಯವನ್ನು ಸ್ವಚ್ಛಗೊಳಿಸುವ ಕಾಮಗಾರಿ ಪೂರ್ಣಗೊಳಿಸಲು ಕಾವೇರಿ ನೀರಾವರಿ ನಿಗಮಕ್ಕೆ ಹೈಕೋರ್ಟ್ ಮತ್ತೆ 15 ದಿನಗಳ ಕಾಲಾವಕಾಶ ನೀಡಿದೆ.
ಭಾಗಮಂಡಲದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲ್ಸೇತುವೆ ನಿರ್ಮಿಸುವ ಯೋಜನೆಯಿಂದ ನದಿ ಮಾಲಿನ್ಯವಾಗುತ್ತಿದೆ ಮತ್ತು ನದಿಪಾತ್ರದಲ್ಲಿ ಒಳಚರಂಡಿ ನೀರು ಹರಿಯುತ್ತಿದೆ. ಆದ್ದರಿಂದ ನದಿಪಾತ್ರದಲ್ಲಿ ಉಂಟಾಗಿರುವ ಮಾಲಿನ್ಯ ಸ್ವಚ್ಛಗೊಳಿಸಲು ಆದೇಶಿಸುವಂತೆ ಕೋರಿ ಸ್ಥಳೀಯ ನಿವಾಸಿ ಎಸ್.ಇ. ಜಯಂತ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಪ್ರೀತಿ ಮಾಡಲು ಅನುಮತಿ, ಅಪ್ರಾಪ್ತರ ಸೆಕ್ಸ್ಗೆ ಅನುಮತಿ ಇಲ್ಲ; ಹೈಕೋರ್ಟ್
ವಿಚಾರಣೆ ವೇಳೆ ನಿಗಮದ ಪರ ವಕೀಲರು ಹಾಜರಾಗಿ, ಭಾಗಮಂಡಲದಲ್ಲಿ ಕಾವೇರಿ ಮತ್ತು ಕನ್ನಿಕೆ ನದಿಪಾತ್ರದಲ್ಲಿ ಉಂಟಾಗಿರುವ ಮಾಲಿನ್ಯ ಸ್ವಚ್ಛಗೊಳಿಸುವ ಕಾರ್ಯ ನಡೆಸಲು ಗುತ್ತಿಗೆ ನೀಡಲಾಗಿದೆ. ಕಾಮಗಾರಿ ಪೂರ್ಣಗೊಳಿಸಲು 15 ದಿನ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಆ ಮನವಿಗೆ ಒಪ್ಪಿದ ನ್ಯಾಯಪೀಠ, ಕಾಮಗಾರಿ ಪೂರ್ಣಗೊಳಿಸಲು 15 ದಿನ ಕಾವಲಾವಾಶ ನೀಡಿ ವಿಚಾರಣೆ ಮುಂದೂಡಿತು.
ಕಾವೇರಿ ಹಾಗೂ ಕನ್ನಿಕೆ ನದಿಪಾತ್ರದಲ್ಲಿ ಉಂಟಾಗಿರುವ ಮಾಲಿನ್ಯವನ್ನು ಸ್ವಚ್ಛಗೊಳಿಸುವ ಕಾಮಗಾರಿಯನ್ನು ಎರಡು ತಿಂಗಳ ಅವಧಿಯಲ್ಲಿ (ಮಾರ್ಚ್ 24ರೊಳಗೆ) ಪೂರ್ಣಗೊಳಿಸುವಂತೆ ಕಾವೇರಿ ನಿರಾವರಿ ನಿಗಮಕ್ಕೆ 2023ರ ಫೆ.6ರಂದು ಹೈಕೋರ್ಟ್ ಆದೇಶಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ