ಸಾರಿಗೆ ನೌಕರರಿಗೆ ಬಂಪರ್‌ ಕೊಡುಗೆ ನೀಡಿದ ಸಿದ್ದು ಸರ್ಕಾರ..!

Published : Jun 16, 2023, 08:01 AM IST
ಸಾರಿಗೆ ನೌಕರರಿಗೆ ಬಂಪರ್‌ ಕೊಡುಗೆ ನೀಡಿದ ಸಿದ್ದು ಸರ್ಕಾರ..!

ಸಾರಾಂಶ

ಮಾ.17ರಿಂದ ಪೂರ್ವಾನ್ವಯ ಆಗುವಂತೆ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡಲು ನಿರ್ಧರಿಸಲಾಗಿದೆ. ಶೇ.15ರಷ್ಟು ವೇತನ ಹೆಚ್ಚಳ ಮಾಡಿದ್ದು, ಇದರಿಂದ ಪ್ರತಿ ತಿಂಗಳು 45.13 ಕೋಟಿ ರು. ಹೊರೆ ಬೀಳಲಿದೆ. ವಾರ್ಷಿಕ 541.56 ಕೋಟಿ ರು.ಗಳಂತೆ ಮುಂದಿನ 4 ವರ್ಷಗಳಲ್ಲಿ 2,166 ಕೋಟಿ ರು. ಹೊರೆ ಬೀಳಲಿದೆ. 

ಬೆಂಗಳೂರು(ಜೂ.16):  ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆಯಿಂದ ಸರ್ಕಾರಿ ಸಾರಿಗೆ ನಿಗಮಗಳು ದಿವಾಳಿಯಾಗಲಿವೆ ಎಂಬ ಆರೋಪಗಳ ಬೆನ್ನಲ್ಲೇ ಸಾರಿಗೆ ಇಲಾಖೆಗೆ ರಾಜ್ಯ ಸರ್ಕಾರ ಬಂಪರ್‌ ಕೊಡುಗೆ ನೀಡಿದ್ದು, ಸಿಬ್ಬಂದಿಯ ವೇತನವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದೆ. ಅಲ್ಲದೆ, ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ಬಸ್ಸುಗಳಿಗೆ ಮೋಟಾರು ವಾಹನ ತೆರಿಗೆ ವಿನಾಯಿತಿ ನೀಡಲಾಗಿದೆ. ತನ್ಮೂಲಕ ವರ್ಷಕ್ಕೆ 79.85 ಕೋಟಿ ರು. ಉಳಿತಾಯವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ ತಿಳಿಸಿದ್ದಾರೆ.

4 ವರ್ಷಗಳಲ್ಲಿ 2,166 ಕೋಟಿ ರು. ಹೊರೆ:

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾ.17ರಿಂದ ಪೂರ್ವಾನ್ವಯ ಆಗುವಂತೆ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡಲು ನಿರ್ಧರಿಸಲಾಗಿದೆ. ಶೇ.15ರಷ್ಟು ವೇತನ ಹೆಚ್ಚಳ ಮಾಡಿದ್ದು, ಇದರಿಂದ ಪ್ರತಿ ತಿಂಗಳು 45.13 ಕೋಟಿ ರು. ಹೊರೆ ಬೀಳಲಿದೆ. ವಾರ್ಷಿಕ 541.56 ಕೋಟಿ ರು.ಗಳಂತೆ ಮುಂದಿನ 4 ವರ್ಷಗಳಲ್ಲಿ 2,166 ಕೋಟಿ ರು. ಹೊರೆ ಬೀಳಲಿದೆ ಎಂದು ತಿಳಿಸಿದರು.

ಬಸ್ಸಿನಲ್ಲಿ ಶೋಭಾ ಕರಂದ್ಲಾಜೆಗೂ ಫ್ರೀ ಎಂದ ಕಾಂಗ್ರೆಸ್‌ಗೆ ಕೇಂದ್ರ ಸಚಿವೆ ತರಾಟೆ

ಡಬಲ್‌ ಡೆಕ್ಕರ್‌ ಬಸ್‌ ಖರೀದಿಗೆ ಅನುದಾನ:

ಇನ್ನು ಡಬಲ್‌ ಡೆಕ್ಕರ್‌ ವಿದ್ಯುತ್‌ ಚಾಲಿತ ಬಸ್‌ ಖರೀದಿಗೆ ಅನುಮೋದನೆ ನೀಡಲಾಗಿದೆ. 28.13 ಕೋಟಿ ರು. ಅನುದಾನ ನೀಡಲಿದ್ದು, ಈ ಬಜೆಟ್‌ನಲ್ಲಿ ಸಾರಿಗೆ ನಿಗಮಗಳು ಬಸ್‌ ಖರೀದಿಸಲು ಅವಕಾಶ ನೀಡಲಾಗಿದೆ. ಎಷ್ಟುಬಸ್‌ ಖರೀದಿ ಎಂಬುದು ಟೆಂಡರ್‌ ಪ್ರಕ್ರಿಯೆ ಬಳಿಕ ತಿಳಿದು ಬರಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Discover Koppal: ವಿಶ್ವದ ಗಮನ ಸೆಳೆಯಲಿದೆ ಹಿರೇಬೆಣಕಲ್: ಡಿಸ್ಕವರ್ ಕೊಪ್ಪಳಕ್ಕೆ ಡಿಸಿ ವಿದ್ಯುಕ್ತ ಚಾಲನೆ
Breaking News: ಕೋಮುದ್ವೇಷ ಭಾಷಣ ಆರೋಪ: ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎಫ್‌ಐಆರ್!