
ಬೆಂಗಳೂರು, (ಮಾ.19): ರಾಜ್ಯದಲ್ಲಿ ಸಹ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂದು (ಶುಕ್ರವಾರ) ಸಹ ರಾಜ್ಯದಲ್ಲಿ ಒಂದೇ ದಿನ 1587 ಜನರಿಗೆ ಸೋಂಕು ತಗುಲಿದ್ದು, 10 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,66,689 ಕ್ಕೆ ಏರಿಕೆಯಾಗಿದ್ರೆ, ಇದುವರೆಗೆ 12,425 ಜನ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಮತ್ತೆ ಕೊರೋನಾ ಏರಿಕೆ: ಸಾರ್ವಜನಿಕರಿಗೆ ಸಿಎಂ ವಿಶೇಷ ಮನವಿ
ಇನ್ನು ಕಳೆದ 24 ಗಂಟೆಗಳಲ್ಲಿ 869 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟು 9,42,178 ಜನ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 1037 ಜನರಿಗೆ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8623 ಕ್ಕೆ ಏರಿಕೆಯಾಗಿದೆ. ಇವತ್ತು ಬೆಂಗಳೂರಿನಲ್ಲಿಂದು 6 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ 12,067 ಸಕ್ರಿಯ ಪ್ರಕರಣಗಳು ಇದ್ದು 131 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ