ಬಸ್ ಮುಷ್ಕರ : ಸಾರಿಗೆ ನಿಗಮಗಳಿಗೆ 17 ಕೋಟಿ ರು. ನಷ್ಟ

Kannadaprabha News   | Asianet News
Published : Apr 08, 2021, 07:21 AM IST
ಬಸ್ ಮುಷ್ಕರ : ಸಾರಿಗೆ ನಿಗಮಗಳಿಗೆ 17 ಕೋಟಿ ರು. ನಷ್ಟ

ಸಾರಾಂಶ

ರಾಜ್ಯದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಸ್ ಮುಷ್ಕರ ನಡೆದಿದ್ದು ಇದರಿಂದ ಸಾರಿಗೆ ಇಲಾಖೆಗೆ 17 ಕೋಟಿ ನಷ್ಟವಾಗಿದೆ. ಮೊದಲ ದಿನವೇ ಭಾರೀ ನಷ್ಟ ಉಂಟಾಗಿದೆ. 

 ಬೆಂಗಳೂರು (ಏ.08):  ಸಾರಿಗೆ ನೌಕರರ ಮುಷ್ಕರದ ಮೊದಲ ದಿನವಾದ ಬುಧವಾರ ಬಸ್‌ಗಳು ರಸ್ತೆಗೆ ಇಳಿಯದ ಪರಿಣಾಮನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಸುಮಾರು 17 ಕೋಟಿ ರು. ಆದಾಯ ಖೋತಾ ಆಗಿದೆ. ಕೊರೋನಾದಿಂದ ಪ್ರಯಾಣಿಕರ ಸಂಖ್ಯೆ ಕುಸಿತವಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಾರಿಗೆ ನಿಗಮಗಳಿಗೆ ಈ ಮುಷ್ಕರವೂ ದೊಡ್ಡ ಹೊಡೆತ ನೀಡಿದೆ.

4 ನಿಗಮಗಳ ಒಟ್ಟು 22 ಸಾವಿರ ಬಸ್‌ಗಳ ಪೈಕಿ ಕೇವಲ 430 ಬಸ್‌ಗಳು ಮಾತ್ರ ಪೊಲೀಸ್‌ ಭದ್ರತೆಯಲ್ಲಿ ಕೆಲ ಕಾಲ ಕಾರ್ಯಾಚರಣೆ ನಡೆಸಿವೆ. ಹೀಗಾಗಿ ಕೆಎಸ್‌ಆರ್‌ಟಿಸಿಗೆ ದಿನದ ಆದಾಯ ಸುಮಾರು 7.50 ಕೋಟಿ ರು., ಬಿಎಂಟಿಸಿಗೆ ಸುಮಾರು 3 ಕೋಟಿ ರು., ಈಶಾನ್ಯ ಸಾರಿಗೆ ನಿಗಮ ಹಾಗೂ ವಾಯುವ್ಯ ಸಾರಿಗೆ ನಿಗಮಕ್ಕೆ ತಲಾ ಸುಮಾರು 3.50 ಕೋಟಿ ರು. ಆದಾಯ ನಷ್ಟವಾಗಿದೆ ಎಂದು ಕೆಎಸ್‌ಆರ್‌ಟಿಸಿಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಸಾರಿಗೆ ಮುಷ್ಕರ; ಮಾತುಕತೆಗೆ ಬಿಎಸ್‌ ಯಡಿಯೂರಪ್ಪ ಆಹ್ವಾನ ...

ಸಾರಿಗೆ ನೌಕರರು ತಮ್ಮ ಬೇಡಿಕೆ ಈಡೇರಿಸುವವರೆಗೂ ಮುಷ್ಕರ ಮುಂದುವರಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಗುರುವಾರವೂ ಸಾರಿಗೆ ಬಸ್‌ಗಳು ರಸ್ತೆಗೆ ಇಳಿಯುವುದಿಲ್ಲ, ಹೀಗಾಗಿ ಸಾರಿಗೆ ನಿಗಮಗಳಿಗೆ ಆರ್ಥಿಕ ಸ್ಥಿತಿ ಮತ್ತಷ್ಟುಬಿಗಡಾಯಿಸಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉಳಿ ಪೆಟ್ಟು ಬಿದ್ದಾಗಲಷ್ಟೇ ಶಿಲೆಆಗುತ್ತದೆ ಕಲ್ಲು: ಡಿಕೆ ಹಿತನುಡಿ
ಬೆಂಗಳೂರು ನಗರದಲ್ಲಿ ಮತ್ತೆ 150 ಇಂಡಿಗೋ ವಿಮಾನಗಳ ಸಂಚಾರ ರದ್ದು