ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ವರ್ಗ;  ಜವಾಬ್ದಾರಿ ಯಾರಿಗೆ?

Published : Mar 31, 2021, 08:27 PM ISTUpdated : Mar 31, 2021, 08:49 PM IST
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ವರ್ಗ;  ಜವಾಬ್ದಾರಿ ಯಾರಿಗೆ?

ಸಾರಾಂಶ

ಐಎಎಸ್ ಅಧಿಕಾರಿಗಳ  ವರ್ಗಾವಣೆ/  ಬಿಬಿಎಂಪಿ ಆಯುಕ್ತರಾಗಿದ್ದ ಮಂಜುನಾಥ್ ಪ್ರಸಾದ್ ವರ್ಗಾವಣೆ/ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ/ 17 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ

ಬೆಂಗಳೂರು (ಮಾ.​ 31) ರಾಜ್ಯ ಸರ್ಕಾರ  ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದು ಮೇಜರ್ ಸರ್ಜರಿ ಮಾಡಿದೆ. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸೇರಿದಂತೆ 17 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ. 

ಮಂಜುನಾಥ್​ ಪ್ರಸಾದ್​ ಆಯುಕ್ತರಾದ ನಂತರ ಬಿಬಿಎಂಪಿಯಲ್ಲಿ  ಬದಲಾವಣೆ ಗಾಳಿ  ಬೀಸಿತ್ತು ಎಂದು ವರದಿಗಳಾಗಿದ್ದವು. ಬಿಬಿಎಂಪಿ ಜನಪ್ರತಿನಿಧಿಗಳ ಆಡಳಿತಾವಧಿ ಸಹ ಮುಗಿದಿತ್ತು.  ಪ್ರಸಾಸ್ ಅವರನ್ನು ಬಿಬಿಎಂಪಿಯಿಂದ ಎತ್ತಂಗಡಿ ಮಾಡಿದ್ದು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ.

UPSC  ಹೊಸ ಹುದ್ದೆಗಳಿವೆ, ಅರ್ಜಿ ಹಾಕಿ

ಮಂಜುನಾಥ್​ ಪ್ರಸಾದ್​ ಸ್ಥಾನದಲ್ಲಿ ಮತ್ತೋರ್ವ ಹಿರಿಯ ಐಎಎಸ್​ ಅಧಿಕಾರಿ ಗೌರವ್​ ಗುಪ್ತಾ ಅವರನ್ನು ನೇಮಕ ಮಾಡಲಾಗಿದ್ದು ಬಿವಿಎಂಪಿ ಆಯುಕ್ತರಾಗಿದ್ದಾರೆ. . ಇದಲ್ಲದೆ, ಎಚ್. ಎನ್ ಗೋಪಾಲಕೃಷ್ಣ ಅವರನ್ನು ಐಟಿಬಿಟಿ ನಿರ್ದೇಶಕರನ್ನಾಗಿ, ಎಸ್. ಹೊನ್ನಾಂಬ ಅವರನ್ನು ಗಣಿ ಮತ್ತು ಭೂ ವಿಜ್ಞಾನ ನಿರ್ದೇಶಕಿಯನ್ನಾಗಿ, ಸಿಂಧು ಬಿ ರೂಪೇಶ್ ಅವರನ್ನು ಪ್ರವಾಸೋದ್ಯಮ‌‌ ಇಲಾಖೆ ನಿರ್ದೇಶಕಿಯನ್ನಾಗಿ ನೇಮಕ ಮಾಡಿ ಆದೇಶ   ಹೊರಡಿಸಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್