
ಬೆಂಗಳೂರು : ಸ್ಯಾಂಡಲ್ ವುಡ್ ನಿರ್ಮಾಪಕ ಶೈಲೆಂದ್ರ ಬಾಬುಗೆ ಕೋಟಿ ಕೋಟಿ ವಂಚನೆ ಮಾಡಲಾಗಿದೆ.
ಬಿ.ಎಚ್.ಬಸವರಾಜು ಎನ್ನುವ ವ್ಯಕ್ತಿ ಖ್ಯಾತ ನಿರ್ಮಾಪಕ ಶೈಲೇಂದ್ರ ಬಾಬುಗೆ ವಂಚನೆ ಮಾಡಿದ್ದಾರೆ. ಆಸ್ತಿ ಖರೀದಿ ಮಾಡಬೇಕು ಎಂದು ಬಾಬು ಬಳಿ ಬಸವರಾಜು 2 ಕೋಟಿ ರು. ಸಾಲ ಪಡೆದಿದ್ದರು. ಬಳಿಕ ಕೊಟ್ಟ ಹಣವನ್ನು ಮರಳಿ ಕೇಳಿದರೆ ಬೆದರಿಕೆ ಒಡ್ಡಿದ್ದಾರೆ ಎನ್ನಲಾಗಿದೆ.
ಹಣ ವಾಪಸು ಕೇಳಿದರೆ ನಿನ್ನನ್ನು ಮುಗಿಸುವುದಾಗಿ ಬಸವರಾಜು ಸಹಚರರು ಬೆದರಿಕೆ ಹಾಕಿದ್ದಾರೆ.
ಈ ಹಿನ್ನಲೆಯಲ್ಲಿ ಶೈಲೇಂದ್ರ ಬಾಬು ಅಶೋಕನಗರ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಐಪಿಸಿ 506, 420 ಹಾಗೂ 34 ರ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ