
ಬೆಂಗಳೂರು(ನ.29): ‘ನಿವಾರ್’ ಚಂಡಮಾರುತದ ಆರ್ಭಟ ಅಂತ್ಯವಾದ ಬೆನ್ನಲ್ಲೇ ಬಂಗಾಳ ಕೊಲ್ಲಿಯ ಆಗ್ನೇಯ ಭಾಗದ ಅಂಡಮಾನ್ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿದಿದೆ. ಹೀಗಾಗಿ ಡಿ.2ರವರೆಗೆ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಂಭವವಿದೆ.
‘ವಾಯುಭಾರ ಕುಸಿತದಿಂದಾಗಿ ಗಾಳಿಯ ಒತ್ತಡ ತೀರಾ ಕಡಿಮೆ ಇದೆ. ನ. 30ರ ವೇಳೆಗೆ ಮೇಲ್ಮೈ ಸುಳಿಗಾಳಿ ತೀವ್ರವಾಗುವ ಲಕ್ಷಣವಿದೆ. ಅಲ್ಲಿಂದ ಭಾರಿ ಪ್ರಮಾಣದ ಸುಳಿಗಾಳಿ ಪಶ್ಚಿಮ ದಿಕ್ಕಿಗೆ ಚಲಿಸಿ (ನ.30ಕ್ಕೆ) ತಮಿಳುನಾಡಿನ ಕರಾವಳಿ ಭಾಗ ತಲುಪಲಿದೆ. ಜೊತೆಗೆ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನ.30ರವರೆಗೆ ಗುಡುಗು ಸಹಿತ ಮಳೆ ಬೀಳಲಿದೆ. ಡಿ.1 ಮತ್ತು 2ರಂದು ಸಾಮಾನ್ಯ ಮಳೆಯ ಸಂಭವವಿದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಿಲಿಕಾನ್ ಸಿಟಿಯಲ್ಲಿ ತುಂತುರು ಮಳೆ: ಜನರ ಪರದಾಟ
ಎಲ್ಲಿ ಎಷ್ಟು ಮಳೆ?:
ನ. 28ರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ ಕಳೆದ 24 ಗಂಟೆಯಲ್ಲಿ ರಾಜ್ಯದ ಬಳ್ಳಾರಿ ಜಿಲ್ಲೆಯ ಕುಡಿತಿನಿಯಲ್ಲಿ ಹೆಚ್ಚು 3 ಸೆಂ.ಮೀ. ಮಳೆಯಾಗಿದೆ. ಯಾದಗಿರಿಯ ಸೈದಾಪುರ, ರಾಯಚೂರು, ಕೋಲಾರದ ರಾಯಲ್ಪಡು, ತುಮಕೂರಿನ ಪಾವಗಡದಲ್ಲಿ ತಲಾ 1 ಸೆಂ.ಮೀ. ಮಳೆ ಬಿದ್ದಿದೆ. ರಾಜ್ಯದ ಗರಿಷ್ಠ ತಾಪಮಾನ ಉತ್ತರ ಕನ್ನಡದ ಶಿರಾಲಿಯಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಮತ್ತು ದಾವಣಗೆರೆಯಲ್ಲಿ ಕನಿಷ್ಠ 12.3 ಡಿಗ್ರಿ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ