
ಬೆಂಗಳೂರು [ಜ.17]: ರಾಜ್ಯದಲ್ಲಿ ಪ್ರವಾಹ ಸೇರಿದಂತೆ ವಿವಿಧ ನೈಸರ್ಗಿಕ ವಿಕೋಪಗಳಿಂದ ಕಳೆದ ವರ್ಷ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರು.ನಂತೆ ಬಿಡುಗಡೆ ಮಾಡಿರುವ 5.18 ಕೋಟಿ ರು. ಹಣವನ್ನು ಮೃತರ ವಾರಸುದಾರರಿಗೆ ಜಮೆ ಮಾಡುವಂತೆ ಸರ್ಕಾರ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದೆ.
ನೆರೆ ಪರಿಹಾರ ಪಡೆದ ರೈತರಿಗೆ ಸಿಎಂ ಪತ್ರ!...
ಕಳೆದ ಆಗಸ್ಟ್ನಲ್ಲಿ ಎದುರಿಸಿದ್ದ ಭೀಕರ ಪ್ರವಾಹ, ಅತಿವೃಷ್ಟಿಹಾಗೂ ಅದಕ್ಕೂ ಮುನ್ನ ಪೂರ್ವ ಮುಂಗಾರಿನಲ್ಲಿ ಉಂಟಾಗಿದ್ದ ಬರ ಸಿಡಿಲು ಮತ್ತಿತರ ನೈಸರ್ಗಿಕ ವಿಕೋಪಗಳಿಂದ ಒಟ್ಟು 247 ಜನರು ರಾಜ್ಯದಲ್ಲಿ ಮೃತಪಟ್ಟಿದ್ದರು.
ರೋಣ: ನೆರೆ ಸಂತ್ರಸ್ತರ ಭರವಸೆ ಮರೆತ ಜಿಲ್ಲಾಧಿಕಾರಿ...
ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಅದರ ಆಧಾರದಲ್ಲಿ ಕೇಂದ್ರ ಸರ್ಕಾರ ಪ್ರತಿ ಮೃತರ ಕುಟುಂಬಕ್ಕೆ ಎರಡು ಲಕ್ಷ ರು.ನಂತೆ ಒಟ್ಟು 5.18 ಕೋಟಿ ರು. ಬಿಡುಗಡೆ ಮಾಡಿದ್ದು, ಇದನ್ನು ನೇರ ನಗದು ವರ್ಗಾವಣೆ (ಆರ್ಟಿಜಿಎಸ್) ಮೂಲಕ ಮೃತರ ವಾರಸುದಾರರ ಬ್ಯಾಂಕ್ ಖಾತೆಗೆ ಜಮೆ ಮಾಡಲು ಆಯಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ