ಗುಡ್ ನ್ಯೂಸ್: ಒಟ್ಟಿಗೆ 2 ತಿಂಗಳ ಆಹಾರ ಧಾನ್ಯ ವಿತರಣೆಗೆ ಕರ್ನಾಟಕ ಸರ್ಕಾರ ತೀರ್ಮಾನ

Published : Mar 21, 2020, 06:06 PM ISTUpdated : Mar 21, 2020, 08:44 PM IST
ಗುಡ್ ನ್ಯೂಸ್: ಒಟ್ಟಿಗೆ 2 ತಿಂಗಳ ಆಹಾರ ಧಾನ್ಯ ವಿತರಣೆಗೆ ಕರ್ನಾಟಕ ಸರ್ಕಾರ ತೀರ್ಮಾನ

ಸಾರಾಂಶ

ಕರ್ನಾಟಕದಲ್ಲಿ ಕೊರೋನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಜನರು ಮನೆಯಿಂದ ಹೊರಬರಲು ಹೆದರುವಂತಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ತೀರ್ಮಾನವೊಂದನ್ನ ತೆಗೆದುಕೊಂಡಿದೆ.

ಬೆಂಗಳೂರು, [ಮಾ.21]: ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೊರಗಡೆ ಬರಲು ಹೆದರಿ ಮನೆಯೊಳಗೆ ಸೇರಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂಜಾಗೃತಾ ಕ್ರಮ ವಹಿಸಿದ್ದು, ಒಟ್ಟಿಗೆ ತಿಂಗಳ ಆಹಾರ ಧಾನ್ಯ ವಿತರಣೆ ಮಾಡಲು ತೀರ್ಮಾನಿಸಿದೆ.

ಈ ಬಗ್ಗೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಹಾರ ಕೊರತೆ ಬಗ್ಗೆ ಬಹಳ ಜನ ನನಗೆ ಕರೆ ಬಂದಿದೆ. ಇದರಿಂದ 2 ತಿಂಗಳ ಆಹಾರ ಧಾನ್ಯ ನೀಡಲು ತಿರ್ಮಾನಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಜನತಾ ಕರ್ಫ್ಯೂ ಬಗ್ಗೆ ಯಡಿಯೂರಪ್ಪ ವಿಶೇಷ ಮನವಿ: ಏನು ಹೇಳಿದ್ದಾರೆ ನೊಡಿ..!

ರಾಜ್ಯದಲ್ಲಿ ಹೆಚ್ಚಿನ ಜನರು ಪಡಿತರ ಮೇಲೆ ಅವಲಂಬನೆಯಾಗಿದೆ. ಅವರಿಗೆ ಕಷ್ಟವಾಗಬಾರದು ಎನ್ನುವ ದೃಷ್ಟಿಯಿಂದ ಏಪ್ರಿಲ್ ಮತ್ತು ಮೇ ತಿಂಗಳ ಆಹಾರ ಧಾನ್ಯ ನೀಡಲಾಗುವುದು ಎಂದರು.

 ಮಾರ್ಚ್ 23ರಿಂದ ಬೆಳಗ್ಗೆ 7ರಿಂದ ರಾತ್ರಿ 9ರವರೆಗೆ ವಿತರಣೆ ಮಾಡೋದಾಗಿ ಸಚಿವ ಗೋಪಾಲಯ್ಯ ಹೇಳಿದ್ದಾರೆ. ಈ ಹಿಂದೆ ಬಿಪಿಎಸ್ ಕಾರ್ಡ್ ಮತ್ತು ಎಪಿಎಲ್‌ಗೆ ಏನೆಲ್ಲಾ ಪಡಿತರ ಸಿಗುತ್ತಿತ್ತೋ, ಅದೇ ಮಾದರಿಯಲ್ಲಿ ಒಟ್ಟಿಗೆ ಎರಡು ತಿಂಗಳ ಪಡಿತರ ದೊರೆಯಲಿದೆ.

ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಈಗಾಗಲೇ 20ಕ್ಕೆ ಏರಿಕೆಯಾಗಿದ್ದು,  ಪರಿಸ್ಥಿತಿ ಬಿಗಡಾಯಿಸವು ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಇದರಿಂದ ಜನರು ಮನೆಯಿಂದ ಹೊರಬರಲು ಹೆದರುವಂತಾಗಿದೆ. ಪರಿಣಾಮ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿರುವುದು ಒಳ್ಳೆಯ ಸಂಗತಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!