
ಬೀದರ್/ಮಂಡ್ಯ : ಶಂಕಿತ ಎಚ್1ಎನ್1 ಸೋಂಕಿಗೆ ರಾಜ್ಯದಲ್ಲಿ ಮತ್ತಿಬ್ಬರು ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಶಂಕಿತ ಎಚ್1ಎನ್1 ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಏರುತ್ತಲೇ ಇದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೀದರ್ ಜಿಲ್ಲೆಯ ಔರಾದ್ನ ಹೊರಂಡಿ ಗ್ರಾಮದ ಕೃಷಿ ಕಾರ್ಮಿಕ ವಿಜಯಕುಮಾರ ಶಿಂಧೆ, ಮಂಡ್ಯದ ಸಾವಿತ್ರಮ್ಮ(45) ಮೃತರು.
ಬೀದರ್ನಲ್ಲಿ ಇತ್ತೀಚೆಗಷ್ಟೇ ಶಂಕಿತ ಎಚ್1ಎನ್1 ಸೋಂಕಿಗೆ ಇಬ್ಬರು ಬಲಿಯಾಗಿದ್ದರು. ಇದರ ಬೆನ್ನಲ್ಲೇ ಈಗ ವಿಜಯ ಕುಮಾರ್ ಮೃತಪಟ್ಟಿದ್ದಾರೆ. ಕೆಲದಿನಗಳಿಂದ ಜ್ವರದಿಂದ ಬಳಲುತ್ತಿದ್ದ ವಿಜಯಕುಮಾರ್ ಅವರು ಮಹಾರಾಷ್ಟ್ರದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇನ್ನು ಶಂಕಿತ ಎಚ್1ಎನ್1ರಿಂದ ಬಳಲುತ್ತಿದ್ದ ಸಾವಿತ್ರಮ್ಮ ಅವರನ್ನು ಮಂಡ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿರಲಿಲ್ಲ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು ಈಗ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ