ಇಬ್ಬರ ರಾಜೀನಾಮೆ : ತೆರವಾದ ಸ್ಥಾನಕ್ಕೆ ರಾಜ್‌, ಸಿದ್ರಾಮಪ್ಪ ನೇಮಕ

Kannadaprabha News   | Asianet News
Published : Nov 03, 2020, 07:45 AM IST
ಇಬ್ಬರ ರಾಜೀನಾಮೆ : ತೆರವಾದ ಸ್ಥಾನಕ್ಕೆ ರಾಜ್‌, ಸಿದ್ರಾಮಪ್ಪ ನೇಮಕ

ಸಾರಾಂಶ

ಇಬ್ಬರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮತ್ತಿಬ್ಬರನ್ನು ಆಯ್ಕೆ ಮಾಡಲಾಗಿದೆ. 

ಬೆಂಗಳೂರು (ನ.03): ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಗೌರವ ಕಾರ್ಯದರ್ಶಿಯಾಗಿ ಲೇಖಕ ಕೆ.ರಾಜಕುಮಾರ್‌ ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಯಾಗಿ ನೃಪತುಂಗ ಕನ್ನಡ ಬಳದ ಅಧ್ಯಕ್ಷ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಅವರನ್ನು ನೇಮಕ ಮಾಡಲಾಗಿದೆ. 

ಕನ್ನಡ ಸಾಹಿತ್ಯ ಪರಿಷತ್ತಿನ ಹಾಲಿ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿ ಶೇಖರಗೌಡ ಮಾಲಿ ಪಾಟೀಲ್‌ ಅವರು ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ತೆರವಾದ ಸ್ಥಾನಗಳಿಗೆ ಕಾರ್ಯಕಾರಿ ಸಮಿತಿ ನಿರ್ಣಯದಂತೆ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮನು ಬಳಿಗಾರ್‌ ಅವರು ಕೆ.ರಾಜಕುಮಾರ್‌ ಮತ್ತು ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಅವರಿಗೆ ಕನ್ನಡ ಬಾವುಟ ನೀಡುವ ಮೂಲಕ ನೇಮಕ ಮಾಡಿದರು.

'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನಿ ಕನ್ನಡವಾಗಿರು'ಎಂಬಂತಿದ್ದರು ಡಾ. ರಾಜ್ ...

ಚುನಾವಣೆಗೆ ಸಿದ್ಧತೆ: ಬರುವ 2021ರ ಮಾರ್ಚ್ ತಿಂಗಳ ಬಳಿಕ ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕಸಾಪ ಕೇಂದ್ರ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಚುನಾವಣಾ ಪ್ರಚಾರ ಚುರುಕುಗೊಳಿಸಿದ್ದಾರೆ.

ಹಾಲಿ ಕಾರ್ಯಕಾರಿ ಸಮಿತಿಯ ಗೌರವ ಕಾರ್ಯದರ್ಶಿಯಾಗಿದ್ದ ವ.ಚ.ಚನ್ನೇಗೌಡ ಮತ್ತು ಸಂಘ-ಸಂಸ್ಥೆಗಳ ಪ್ರತಿನಿಧಿ ಶೇಖರಗೌಡ ಮಾಲಿ ಪಾಟೀಲ್‌ ಅವರು ಕೂಡಾ ಅಧ್ಯಕ್ಷ ಗಾದಿ ಆಕಾಂಕ್ಷಿಗಳಾಗಿದ್ದಾರೆ. 

ಚುನಾವಣಾ ಕೆಲಸದಲ್ಲಿ ಪರಿಷತ್‌ ಕೆಲಸಗಳಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆಯಾಗಿ ರಾಜೀನಾಮೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಚುನಾವಣಾ ಪ್ರಚಾರವನ್ನು ಮತ್ತಷ್ಟುಚುರುಕುಗೊಳಿಸುವುದಾಗಿ ಕನ್ನಡಪ್ರಭಕ್ಕೆ ಅಧ್ಯಕ್ಷಗಾದಿ ಆಕಾಂಕ್ಷಿ ವ.ಚ.ಚನ್ನೇಗೌಡ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ