ಗೃಹಲಕ್ಷ್ಮಿ ಯೋಜನೆ: ಮಕ್ಕಳು ತೆರಿಗೆದಾರರಾದರೂ ಅಮ್ಮನಿಗೆ 2000 ರು..!

Published : Jun 10, 2023, 02:30 AM IST
ಗೃಹಲಕ್ಷ್ಮಿ ಯೋಜನೆ: ಮಕ್ಕಳು ತೆರಿಗೆದಾರರಾದರೂ ಅಮ್ಮನಿಗೆ 2000 ರು..!

ಸಾರಾಂಶ

ಗೃಹಲಕ್ಷ್ಮಿ ಯೋಜನೆ ಗೊಂದಲ ಸೃಷ್ಟಿಸಿ ಬಳಿಕ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ 

ಬೆಂಗಳೂರು(ಜೂ.10):  ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಕುರಿತಂತೆ ಸಚಿವೆ ಲಕ್ಷ್ಮೇ ಹೆಬ್ಬಾಳ್ಕರ್‌ ತಾವು ನೀಡಿದ್ದ ಹೇಳಿಕೆಯನ್ನು ಒಂದೇ ದಿನದಲ್ಲಿ ಬದಲಿಸಿದ್ದು, ಮನೆಯೊಡತಿಯ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೂ ತಾಯಿಗೆ ಗೃಹಲಕ್ಷ್ಮಿ ಯೋಜನೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಮನೆಯೊಡತಿಯ ಮಕ್ಕಳು ತೆರಿಗೆ ಪಾವತಿದಾರರಿದ್ದರೆ ತಾಯಿ ಗೃಹಲಕ್ಷ್ಮೇ ಯೋಜನೆ ಫಲಾನುಭವಿಯಾಗಲು ಸಾಧ್ಯವಿಲ್ಲ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ ಗುರುವಾರ ಹೇಳಿಕೆ ನೀಡಿದ್ದರು. ಈ ಬಗ್ಗೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿತ್ತು.

ಮಕ್ಕಳು ತೆರಿಗೆ ಕಟ್ಟುತ್ತಿದ್ದರೆ ತಾಯಿಗೆ ಇಲ್ಲ 2000: ಗೃಹಲಕ್ಷ್ಮಿ ಯೋಜನೆಗೆ ಹೊಸ ಷರತ್ತು?

ಈ ಕುರಿತಂತೆ ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೇ ಯೋಜನೆ ಮಾರ್ಗಸೂಚಿಯಲ್ಲಿ ಪತಿ ಅಥವಾ ಪತ್ನಿ ತೆರಿಗೆ ಪಾವತಿದಾರರಾಗಿದ್ದರೆ ಯೋಜನೆ ಅನ್ವಯವಾಗುವುದಿಲ್ಲ ಎಂಬ ಅಂಶವಿದೆ. ಹೀಗಾಗಿ ಮನೆಯೊಡತಿಯ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೂ ಯೋಜನೆ ಅನ್ವಯವಾಗಲಿದೆ. ಈ ಬಗ್ಗೆ ಜನರು ಗೊಂದಲಕ್ಕೆ ಒಳಗಾಗಬಾರದು ಎಂದು ಸ್ಪಷ್ಟಪಡಿಸಿದರು.

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳು ಅಂತ್ಯೋದಯ, ಬಿಪಿಎಲ್‌, ಎಪಿಎಲ್‌ ಯಾವುದಾದರೊಂದಿಗೆ ಪಡಿತರ ಚೀಟಿ ಹೊಂದಿರುವುದು ಕಡ್ಡಾಯ. ಅದರಲ್ಲಿ ಮಹಿಳೆಯರೇ ಮನೆಯೊಡತಿ ಎಂಬ ಅಂಶವಿರಬೇಕು. ರಾಜ್ಯದಲ್ಲಿನ ಪಡಿತರ ಚೀಟಿಯಲ್ಲಿ ಶೇ. 95ರಷ್ಟು ಮಹಿಳೆಯರೇ ಮನೆಯೊಡತಿ ಎಂಬ ಉಲ್ಲೇಖವಿದೆ. ಅದರಿಂದ ಈ ಅಂಶ ಯಾವುದೇ ಸಮಸ್ಯೆಯಾಗುವುದಿಲ್ಲ. ಆಗಸ್ಟ್‌ 17 ಅಥವಾ 18ರಂದು ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು. ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಸಿ ಗೃಹಲಕ್ಷ್ಮೇಯರಿಗೆ 2 ಸಾವಿರ ರು. ನೀಡುವುದನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

ಕರಡು ಅರ್ಜಿಯಲ್ಲಿ ಬದಲಾವಣೆ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಗೃಹ ಲಕ್ಷ್ಮೇ ಯೋಜನೆಯ ಅರ್ಜಿ ನಮೂನೆಯು ನಿಜವಾದದ್ದಾಗಿದ್ದು, ಆದರೆ ಅದು ಕರಡು ಅರ್ಜಿ (ಡ್ರಾಫ್ಟ್‌) ನಮೂನೆಯಾಗಿದೆ. ಅದರಲ್ಲಿ ಸಾಕಷ್ಟು ಲೋಪಗಳಿರುವುದು ಗಮನಕ್ಕೆ ಬಂದಿದೆ. ಅದನ್ನೆಲ್ಲ ಸರಿಪಡಿಸಲಾಗುವುದು. ಪ್ರಮುಖವಾಗಿ ಜಾತಿ ಕಾಲಂ ತೆಗೆದು ವರ್ಗದ ಕಲಂ ಸೇರಿಸಲಾಗುವುದು. ಜತೆಗೆ ವಿಧವೆಯರು ಸೇರಿ ಇನ್ನಿತರಿಗೆ ಅನುಕೂಲವಾಗುವಂತೆ ಅರ್ಜಿಯಲ್ಲಿ ಕಲಂಗಳನ್ನು ಸೇರಿಸಲಾಗುತ್ತದೆ. ಇನ್ನು ಎರಡ್ಮೂರು ದಿನಗಳಲ್ಲಿ ಅಧಿಕೃತ ಅರ್ಜಿ ನಮೂನೆಯನ್ನು ಪ್ರಕಟಿಸಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳ್ಕರ್‌ ವಿವರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?
ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ