ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ: ರಾಜ್ಯದ 30 ಜಿಲ್ಲೆಗೂ ತಲಾ ಒಂದೊಂದು ಅವಾರ್ಡ್

Published : Feb 26, 2020, 06:37 PM ISTUpdated : Feb 26, 2020, 07:45 PM IST
ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ: ರಾಜ್ಯದ 30 ಜಿಲ್ಲೆಗೂ ತಲಾ ಒಂದೊಂದು ಅವಾರ್ಡ್

ಸಾರಾಂಶ

ಕರ್ನಾಟಕ ಜಾನಪದ ಅಕಾಡೆಮಿಯ 2019ನೇ ಸಾಲಿನ ಗೌರವ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ್ದು, 30 ಮಂದಿ ಕಲಾವಿದರು ರಾಜ್ಯ ಜಾನಪದ ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪುರಸ್ಕೃತರ ಹೆಸರುಗಳು  ಈ ಕೆಳಗಿನಂತಿದೆ.

ಉಡುಪಿ,(ಫೆ.26): ಕರ್ನಾಟಕ ಜಾನಪದ ಅಕಾಡೆಮಿಯ 2019ನೇ ಸಾಲಿನ ಗೌರವ ವಾರ್ಷಿಕ ಪ್ರಶಸ್ತಿ ಪ್ರಕಟಿಸಸಲಾಗಿದೆ.

ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಮಂಜಮ್ಮ ಜೋಗತಿಯವರು ಇಂದು (ಬುಧವಾರ) ಪಟ್ಟಿ ಬಿಡುಗಡೆಗೊಳಿಸಿದ್ದು,  30 ಮಂದಿ ಕಲಾವಿದರು 2019ನೇ ಸಾಲಿನ ರಾಜ್ಯ ಜಾನಪದ ಅಕಾಡೆಮಿಯ ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಚರಿತ್ರೆ ಸೃಷ್ಟಿಸೋ ಹರಿಪ್ರಿಯಾ ಅವತಾರ, ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಖಾರ; ಫೆ.26ರ ಟಾಪ್ 10 ಸುದ್ದಿ!

ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಒಬ್ಬೊಬ್ಬ ಕಲಾವಿದರನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವುದು ವಿಶೇಷ.

ಪ್ರಶಸ್ತಿ ಪುರಸ್ಕೃತರು

*. ಬೆಂಗಳೂರು ನಗರ- ಗೌರಮ್ಮ (ಜಾನಪದ ಗಾಯಕಿ) 
*. ಬೆಂಗಳೂರು ಗ್ರಾಮಾಂತರ- ಲಕ್ಷ್ಮಮ್ಮ (ಭಜನೆ ಪದಗಳು) 
*. ರಾಮನಗರ- ಅಂಕನಹಳ್ಳಿ ಶಿವಣ್ಣ (ಪೂಜಾ ಕುಣಿತ) 
*. ಕೋಲಾರ- ಅಂಗಡಿ ವೆಂಕಟೇಶಪ್ಪ (ತತ್ವಪದ ) 
*. ತುಮಕೂರು-ರಂಗಯ್ಯ (ಜಾನಪದ ಗೀತೆ)
 *. ದಾವಣಗೆರೆ- ಪಿ ಜಿ ಪರಮೇಶ್ವರಪ್ಪ (ವೀರಗಾಸೆ) 
*. ಚಿತ್ರದುರ್ಗ- ತಿಪ್ಪಣ್ಣ (ಗೊರವರ ಕುಣಿತ) 
*. ಚಿಕ್ಕಬಳ್ಳಾಪುರ- ಮುನಿರೆಡ್ಡಿ (ಜಾನಪದ ಗಾಯನ ) 
*. ಶಿವಮೊಗ್ಗ -ಜಿಸಿ ಮಂಜಪ್ಪ (ಡೊಳ್ಳುಕುಣಿತ )
*. ಮೈಸೂರು- ಮಾದಶೆಟ್ಟಿ (ಕಂಸಾಳೆ ಕುಣಿತ ) 
*. ಮಂಡ್ಯ- ಸ್ವಾಮಿಗೌಡ (ಬೀಸುವ ಪದಗಳು ) 
*. ಚಾಮರಾಜನಗರ ಗೌರಮ್ಮ (ಸೋಬಾನೆ ಪದ ) 
*. ಕೊಡಗು -ಜಿಕೆ ರಾಮು (ಕೊಡವರ ಕುಣಿತ )
*. ಹಾಸನ - ಕಪಿನಿ ಗೌಡ ಕೆ (ಕೋಲಾಟ ) 
*. ಚಿಕ್ಕಮಗಳೂರು- ಡಾಕ್ಟರ್ ಎಚ್ ಸಿ ಈಶ್ವರ ನಾಯಕ (ನಾಟಿವೈದ್ಯ ) 
*. ಉಡುಪಿ- ಸಾಧು ಪಾಣಾರ (ಭೂತ ಕೋಲ ) * ದಕ್ಷಿಣ ಕನ್ನಡ -ರುಕ್ಮಯ ಗೌಡ (ಸಿದ್ದವೇಷ ) 
*. ಬೆಳಗಾವಿ -ಸಂಕಮ್ಮ (ಸಂಪ್ರದಾಯದ ಪದ )
*. ಬಾಗಲಕೋಟೆ-ರುಕ್ಮಿಣಿ ಮಲ್ಲಪ್ಪ (ಹರನಾಳ ಮದುವೆ ಹಾಡು ) 
*. ಧಾರವಾಡ-ಮಲ್ಲಯ್ಯ ರಾಚಯ್ಯ (ತೋಟಗಂಟಿ ಜಾನಪದ ಸಂಗೀತ) 
*. ಹಾವೇರಿ-ಹನುಮಂತಪ್ಪ ಧಾರವಾಡ (ಭಜನೆ ಕೋಲಾಟ) 
*. ಗದಗ-ನಾಗರಾಜ ನೀ ಜಕ್ಕಮ್ಮ (ನವರ್ ಗೀಗಿ ಪದ) 
*. ವಿಜಯಪುರ- ನಿಮ್ಮವ್ವ ಕೆಂಚಪ್ಪ ಗುಬ್ಬಿ (ಸೋಬಾನೆ ಪದ ) 
*. ಉತ್ತರಕನ್ನಡ ಶ್ರೀಮತಿ ಹುಸೇನಬಿ ಬುಡನ್ ಸಾಬ್ ಸಿದ್ದಿ ಸಿದ್ದಿ ಡಮಾಮಿ ನೃತ್ಯ 
*. ಕಲಬುರ್ಗಿ-ಗಂಗಾಧರಯ್ಯ ಅಗ್ಗಿಮಠ (ಪುರುವಂತಿಕೆ ) 
*. ಬೀದರ್ - ತುಳಸಿ ರಾಮ ಭೀಮರಾವ್ ಸುತಾರ್ (ಆಲದ ಎಲೆಯಿಂದ ಸಂಗೀತ) 
*. ಕೊಪ್ಪಳ- ಶಾಂತವ್ವ ಲಕ್ಷ್ಮಪ್ಪ ಲಮಾಣಿ (ಲಮಾಣಿ ನೃತ್ಯ) 
*. ರಾಯಚೂರು- ಶ್ರೀ ಸೂಗಪ್ಪ ನಾಗಪ್ಪ (ತತ್ವಪದ ) 
*. ಬಳ್ಳಾರಿ -ವೇಷಗಾರ ಮೋತಿ ರಾಮಣ್ಣ (ಹಗಲುವೇಷ) 
*. ಯಾದಗಿರಿ - ಶಿವಮೂರ್ತಿ ತನಿಖೆದಾರ (ಗೀಗಿ ಪದ) ಈ ಬಾರಿಯ ಜನಪದ ತಜ್ಞ ಪ್ರಶಸ್ತಿ 

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ