ಕರ್ನಾಟಕದಲ್ಲಿ ಕೊಂಚ ಇಳಿಕೆ ಕಂಡ ಕೊರೋನಾ: ಇಲ್ಲಿದೆ ಮೇ 29ರ ಅಂಕಿ-ಸಂಖ್ಯೆ

Published : May 29, 2021, 10:24 PM IST
ಕರ್ನಾಟಕದಲ್ಲಿ ಕೊಂಚ ಇಳಿಕೆ ಕಂಡ ಕೊರೋನಾ: ಇಲ್ಲಿದೆ ಮೇ 29ರ ಅಂಕಿ-ಸಂಖ್ಯೆ

ಸಾರಾಂಶ

* ರಾಜ್ಯದಲ್ಲಿ ಕೊಂಚ ಇಳಿಕೆಯಾದ ಕೊರೋನಾ ಸೋಂಕು * ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚು * ಇಲ್ಲಿದೆ ಮೇ.29ರ ಕೊರೋನಾ ಅಂಕಿ-ಸಂಖ್ಯೆ

ಬೆಂಗಳೂರು, (ಮೇ.29): ರಾಜ್ಯದಲ್ಲಿ ಇಂದು (ಶನಿವಾರ) ಕೊರೋನಾ ಸೋಂಕಿನ ಪ್ರಮಾಣದಲ್ಲಿ ಕೊಂಚ ಇಳಿಕೆ ಕಂಡುಬಂದಿದ್ದು, 20,628 ಹೊಸ ಪಾಸಿಟಿವ್ ಕೇಸ್, ಹಾಗೂ 492 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2567449ಕ್ಕೇರಿದ್ರೆ, ಒಟ್ಟು ಸಾವಿನ ಸಂಖ್ಯೆ 28298ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೊರೋನಾದಿಂದ ಹೆತ್ತವರನ್ನ ಕಳೆದುಕೊಂಡ ಮಕ್ಕಳಿಗೆ ಮಹತ್ವದ ಯೋಜನೆ ಘೋಷಿಸಿದ ಸಿಎಂ

ಇನ್ನು ಕಳೆದ 24 ಗಂಟೆಗಳಲ್ಲಿ 42,444 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಈವರೆಗೂ 2189064 ಸೋಂಕಿತರು ಗುಣಮುಖರಾದಂತಾಗಿದೆ. ಇದರೊಂದಿಗೆ ಪ್ರಸ್ತುತ 350066 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಕೋವಿಡ್ ಅಂಕಿ ಸಂಖ್ಯೆ
ಬಾಗಲಕೋಟೆ 166, ಬಳ್ಳಾರಿ 671, ಬೆಳಗಾವಿ 1027, ಬೆಂಗಳೂರು ಗ್ರಾಮಾಂತರ 557, ಬೆಂಗಳೂರು 4889, ಬೀದರ್ 42, ಚಾಮರಾಜನಗರ 365, ಚಿಕ್ಕಬಳ್ಳಾಪುರ 434, ಚಿಕ್ಕಮಗಳೂರು 843, ಚಿತ್ರದುರ್ಗ 763, ದಕ್ಷಿಣ ಕನ್ನಡ 923, ದಾವಣಗೆರೆ 449, ಧಾರವಾಡ 519, ಗದಗ 307, ಹಾಸನ 1024, ಹಾವೇರಿ 194, ಕಲಬುರಗಿ 107, ಕೊಡಗು 333, ಕೋಲಾರ 684, ಕೊಪ್ಪಳ 350, ಮಂಡ್ಯ 453, ಮೈಸೂರು 1720, ರಾಯಚೂರು 340, ರಾಮನಗರ 181, ಶಿವಮೊಗ್ಗ 672, ತುಮಕೂರು 1102, ಉಡುಪಿ 684, ಉತ್ತರ ಕನ್ನಡ 536, ವಿಜಯಪುರ 210, ಯಾದಗಿರಿ 83

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ