30 ಲಕ್ಷ ರೈತರಿಗೆ 20,810 ಕೋಟಿ ರೂ. ಬೆಳೆ ಸಾಲ: ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ

Published : May 31, 2021, 03:54 PM IST
30 ಲಕ್ಷ ರೈತರಿಗೆ 20,810 ಕೋಟಿ ರೂ. ಬೆಳೆ ಸಾಲ:  ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ

ಸಾರಾಂಶ

ರೈತರಿಗೆ ತೊಂದರೆಯಾಗದಂತೆ ಹೆಚ್ಚಿನ ಸಾಲ ನೀಡಲು ಮುಖ್ಯಮಂತ್ರಿಗಳ ಸೂಚನೆ; ಸಚಿವ ಎಸ್ ಟಿ ಎಸ್  ಕಳೆದ ಸಾಲಿನಲ್ಲಿ 25.93 ಲಕ್ಷ ರೈತರಿಗೆ 17,490 ಕೋಟಿ ರೂಪಾಯಿ ಬೆಳೆ ಸಾಲ ನೀಡಿಕೆ, ಶೇ. 114.70 ಸಾಧನೆ ಲಾಕ್‌ಡೌನ್ ಮುಗಿದ ಬಳಿಕ ಡಿಸಿಸಿ ಬ್ಯಾಂಕ್‌ಗಳಿಗೆ ಭೇಟಿ; ಎಸ್ ಟಿ ಎಸ್  ರೈತರಿಗೆ ನೂರಕ್ಕೆ ನೂರು ಸಾಲ ಸಿಗಲು ಕ್ರಮ: ಸೋಮಶೇಖರ್

ಬೆಂಗಳೂರು (ಮೇ.31): ಕಳೆದ ಸಾಲಿನಲ್ಲಿ ಶೇ. 114.70 ರೈತರಿಗೆ ಬೆಳೆಸಾಲ ನೀಡಿಕೆ ಮೂಲಕ ಗುರಿಯನ್ನು ಮೀರಿ ಸಾಧನೆ ಮಾಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಪ್ರಸಕ್ತ ಸಾಲಿನ ಅಂದರೆ, 2021-22ರಲ್ಲಿ 30 ಲಕ್ಷ ರೈತರಿಗೆ 20,810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿಯನ್ನು ನೀಡಿದ್ದೇವೆ ಎಂದು ಸಹಕಾರ ಸಚಿವ  ಎಸ್.ಟಿ. ಸೋಮಶೇಖರ್ ತಿಳಿಸಿದರು.

ವಿಕಾಸಸೌಧದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಯಾವುದೇ ಕಾರಣಕ್ಕೂ ನಮ್ಮ ರೈತಾಪಿ ವರ್ಗದವರಿಗೆ ತೊಂದರೆಯಾಗಬಾರದು. ಹೀಗಾಗಿ 30 ಲಕ್ಷ ರೈತರಿಗೆ ಹೆಚ್ಚಿನ ಸಾಲ ತಲುಪುವಂತಾಗಬೇಕು ಎಂದು ಮುಖ್ಯಮಂತ್ರಿಗಳು ನೀಡಿದ ಸೂಚನೆಯನ್ವಯ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. 

ಕೊರೋನಾ ಕಂಗೆಡಿಸಿದ ಬದುಕು : ಇಟ್ಟಲ್ಲೆ ಮೊಳಕೆಯೊಡೆಯುತ್ತಿದೆ ರಾಶಿ ರಾಶಿ ಭತ್ತ .

ಕಳೆದ ಆರ್ಥಿಕ ವರ್ಷವಾದ 2020-21ರಲ್ಲಿ 24.50 ಲಕ್ಷ ರೈತರಿಗೆ 15,400 ಕೋಟಿ ರೂಪಾಯಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ನೀಡಿಕೆಯ ಗುರಿಯನ್ನು ಹೊಂದಲಾಗಿತ್ತು. ನಮ್ಮ ಅಪೆಕ್ಸ್ ಬ್ಯಾಂಕ್ ಹಾಗೂ 21 ಡಿಸಿಸಿ ಬ್ಯಾಂಕ್ ಗಳು 25,93,982 ರೈತರಿಗೆ 17490 ಕೋಟಿ ರೂಪಾಯಿ ಸಾಲವನ್ನು ನೀಡಿವೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಶೇಕಡಾ 100 ಗುರಿ ಮೀರಿ ಶೇ. 114.70 ಸಾಧನೆಯನ್ನು ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಈ ಸಾಲಿನಲ್ಲಿಯೂ ಇದೇ ರೀತಿಯ ಸಾಧನೆಯನ್ನು ಮಾಡುವ ಬಗ್ಗೆ ಎಂದು ಸಚಿವ ಸೋಮಶೇಖರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. 

ಲಾಕ್‌ಡೌನ್ ಮುಗಿದ ಬಳಿಕ ಡಿಸಿಸಿ ಬ್ಯಾಂಕ್‌ಗಳಿಗೆ ಭೇಟಿ:  ಎಸ್ ಟಿ ಎಸ್ 21 ಡಿಸಿಸಿ ಬ್ಯಾಂಕ್ ಗಳಿಗೆ ಈಗಾಗಲೇ ಸೂಚನೆಯನ್ನು ನೀಡಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ 30 ಲಕ್ಷ ರೈತರನ್ನೂ ತಲುಪಬೇಕು, 20810 ಕೋಟಿ ರೂ. ಬೆಳೆ ಸಾಲವನ್ನು ನೀಡಬೇಕು ಎಂದು ಸೂಚಿಸಿದ್ದೇನೆ. ಲಾಕ್‌ಡೌನ್ ಮುಗಿದ ಬಳಿಕ ಡಿಸಿಸಿ ಬ್ಯಾಂಕ್‌ಗಳಿಗೆ ನಾನೇ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ, ಸಲಹೆ-ಸೂಚನೆಗಳನ್ನು ನೀಡಲಿದ್ದೇನೆ. ಕಳೆದ ಬಾರಿ 5-6 ಡಿಸಿಸಿ ಬ್ಯಾಂಕ್ ಗಳು ಶೇ. 100 ಗುರಿ ಮುಟ್ಟಲು ಸಾಧ್ಯವಾಗಿಲ್ಲ. ಈ ವೇಳೆ ಅವರಿಗೂ ಸಹ ಗುರಿ ಮುಟ್ಟಲೇಬೇಕು ಎಂದು ಸೂಚನೆಯನ್ನು ನೀಡಿದ್ದಾಗಿ ಸಚಿವ ಸೋಮಶೇಖರ್ ತಿಳಿಸಿದರು. 

ರೈತರಿಗೆ ನೂರಕ್ಕೆ ನೂರು ಸಾಲ ಸಿಗಬೇಕು: ಸೋಮಶೇಖರ್ ಡಿಸಿಸಿ ಬ್ಯಾಂಕ್ ಗಳು ತಮಗೆ ನೀಡಿರುವ ಗುರಿಯನ್ನು ತಲುಪಲೇಬೇಕು. ಯಾವುದೇ ಕಾರಣಕ್ಕೂ ಇದರಿಂದ ತಪ್ಪಿಸಿಕೊಳ್ಳಬಾರದು. ರೈತರಿಗೆ ನೂರಕ್ಕೆ ನೂರು ಸಾಲ ಸಿಗಬೇಕು. 21 ಡಿಸಿಸಿ ಬ್ಯಾಂಕ್ ಗಳ ಪ್ರಗತಿ ಪರಿಶೀಲನೆಯನ್ನೂ ಮಾಡಲಿದ್ದು, 30 ಲಕ್ಷ ರೈತರಿಗೆ 20810 ಕೋಟಿ ರೂಪಾಯಿ ಬೆಳೆ ಸಾಲ ದೊರೆಯುವಂತೆ ನೋಡಿಕೊಳ್ಳಲಾಗುವುದು ಎಂದು ಸಚಿವರಾದ ಎಸ್ ಟಿ ಎಸ್ ತಿಳಿಸಿದರು. 

ಹಾಕಿದ್ದು ಲಕ್ಷಾಂತರ ರೂ, ಕೊಳ್ಳುವವರಿಲ್ಲದೇ ಕಲ್ಲಂಗಡಿ ಬೆಳೆದ ರೈತ ಕಂಗಾಲು .

ಡಿಸಿಸಿ ಬ್ಯಾಂಕ್ ಗಳಿಗೆ ಅಪೆಕ್ಸ್ ಬ್ಯಾಂಕ್ ನಿಂದ ಸಹಕಾರ; ಸಚಿವರು  ಕಳೆದ ಬಾರಿ ಏನು ಗುರಿ ಇತ್ತು? ಎಷ್ಟು ಸಾಧನೆ ಮಾಡಲಾಗಿದೆ? ಈ ಬಾರಿ ಎಷ್ಟು ಗುರಿಯನ್ನು ನೀಡಬಹುದು ಎಂಬುದನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್ ಹಾಗೂ ಸಹಕಾರ ಸಂಘಗಳ ನಿಬಂಧಕರಾದ ಜಿಯಾವುಲ್ಲ ಅವರು ಖುದ್ದು ಎಲ್ಲ ಡಿಸಿಸಿ ಬ್ಯಾಂಕ್ ಗಳ ಜೊತೆಗೆ ಚರ್ಚಿಸಿ ಗುರಿಯನ್ನು ನಿಗದಿಪಡಿಸಿದ್ದಾರೆ. ಅಲ್ಲದೆ, ಶೇ. 100 ಗುರಿ ಸಾಧನೆ ಮಾಡಿದ ಡಿಸಿಸಿ ಬ್ಯಾಂಕ್ ಗಳಿಗೆ ಧನ್ಯವಾದಗಳನ್ನು ಸಲ್ಲಿಸಿದ್ದೇವೆ. ಡಿಸಿಸಿ ಬ್ಯಾಂಕ್ ಗಳಿಗೆ ಅಪೆಕ್ಸ್ ಬ್ಯಾಂಕ್ ನಿಂದ ಆಗಬೇಕಾದ ಎಲ್ಲ ಸೌಲಭ್ಯಗಳನ್ನು ಮಾಡಿಕೊಡಲಾಗುವುದು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು, ಶಾಸಕರಾದ ಬೆಳ್ಳಿ ಪ್ರಕಾಶ್ ಅವರ ಸಮ್ಮುಖದಲ್ಲಿ ತಿಳಿಸಿದ್ದೇವೆ ಎಂದು ಸಚಿವರಾದ ಸೋಮಶೇಖರ್ ಅವರು ತಿಳಿಸಿದರು.

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು, ಶಾಸಕರಾದ ಬೆಳ್ಳಿ ಪ್ರಕಾಶ್, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಸಹಕಾರ ಸಂಘಗಳ ನಿಬಂಧಕರಾದ ಜಿಯಾವುಲ್ಲ, ಎಲ್ಲ ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Sharath R Ashok scuba diving: ಸಮುದ್ರದಾಳದಲ್ಲಿ ಆರ್ ಅಶೋಕ್ ಪುತ್ರನ ಗಿನ್ನೆಸ್ ಸಾಹಸ
Karnataka By-Election Results 2026 LIVE: Sharath R Ashok scuba diving - ಸಮುದ್ರದಾಳದಲ್ಲಿ ಆರ್ ಅಶೋಕ್ ಪುತ್ರನ ಗಿನ್ನೆಸ್ ಸಾಹಸ